ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚಖಾತ್ರಿ ಯೋಜನೆಗಳ ಬಗ್ಗೆ ಮನೆಮನೆಗಳಿಗೆ ತೆರಳಿ ತಿಳಿಸುವ ಮೂಲಕ ಅವನ್ನು ಮತವನ್ನಾಗಿ ಪರಿವರ್ತಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಪಕ್ಷ ನಿಮ್ಮನ್ನು ನಂಬಿದೆ. ಇದನ್ನು ಸಾಕಾರಗೊಳಿಸುವ ದೃಷ್ಟಿಯಿಂದ ನೀವು ಕೆಲಸ ಮಾಡಬೇಕಿದೆ ಎಂದರು.
ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಿಗೆ, ಸದಸ್ಯರಿಗೆ ಸಂಪುಟದ ಸ್ಥಾನಮಾನ ನೀಡಲಾಗಿದೆ. ಜಿಲ್ಲಾ ಸಮಿತಿಯವರಿಗೆ 50 ಸಾವಿರ ರೂ. ವೇತನ ನೀಡಲಾಗುತ್ತಿದೆ. ಹಾಗೆಯೇ ಜಿಲ್ಲಾ ಸಮಿತಿಯವರಿಗೆ ಜಿಲ್ಲಾ ಪಂಚಾಯಿತಿಯಲ್ಲಿ, ತಾಲೂಕು ಸಮಿತಿಯವರಿಗೆ ತಾಲ್ಲೂಕು ಪಂಚಾಯಿತಿಗಳಲ್ಲಿ ಕಚೇರಿಗಳನ್ನು ನೀಡಲಾಗಿದೆ. ಪ್ರತಿ ತಾಲ್ಲೂಕಿಗೂ 15 ಸಮಿತಿ ಸದಸ್ಯರಿದ್ದಾರೆ ಎಂದರು.
15 ಮಂದಿಯೂ ತಮ್ಮ ತಾಲ್ಲೂಕಿನ ಪ್ರತಿ ಪಂಚಾಯಿತಿಗೆ ಇಬ್ಬರಂತೆ ಹಂಚಿಕೆ ಮಾಡಿಕೊಂಡು ಬೂತ್ ಗಳಲ್ಲಿ ಎಲ್ಲಾ ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸ್ಥಳೀಯ ನಾಯಕರ ಜೊತೆ ಸೌಹಾರ್ದತೆಯಿಂದ ಚುನಾವಣೆ ನಡೆಸಬೇಕು. ಕಾಂಗ್ರೆಸ್ ಗೆ ಲೀಡ್ ಕೊಡಿಸಬೇಕು ಎಂದು ಸೂಚಿಸಿದರು.
ಸರ್ಕಾರ ನನಗೆ ಡಿಸಿಎಂ ಎಂದು ಗುರುತಿನ ಚೀಟಿ ನೀಡಿದೆ. ಅದಕ್ಕಿಂತಲೂ ಪ್ರಖರವಾದಂತಹ ಗುರುತಿನ ಚೀಟಿಗಳನ್ನು ಸರ್ಕಾರದ ಚಿಹ್ನೆ ಹಾಗೂ ಸದಸ್ಯರ ಅಧ್ಯಕ್ಷರ ಫೋಟೋಗಳೊಂದಿಗೆ ತಯಾರಿಸಲಾಗಿದೆ. ಅದನ್ನು ಕೊರಳಿಗೆ ಹಾಕಿಕೊಂಡು ನೀವು ವಿಧಾನಸೌಧಕ್ಕೂ ಮುಕ್ತವಾಗಿ ಪ್ರವೇಶಿಸಬಹುದು. ಈ ಕಾರ್ಡ್ ಅಥವಾ ಹುದ್ದೆಗಳನ್ನು ದುರುಪಯೋಗಪಡಿಸಿಕೊಂಡರೆ ಮುಲಾಜಿಲ್ಲದೆ ವಜಾಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನೀವು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಸರ್ಕಾರದ ಪ್ರತಿನಿಧಿಗಳು ಎಂಬುದನ್ನು ಮರೆಯಬಾರದು. ಯಾರಾದರೂ ಒಬ್ಬರು ಕೆಟ್ಟ ಹೆಸರನ್ನು ತಂದರೂ ಅದನ್ನು ಸಹಿಸುವುದಿಲ್ಲ ಎಂದರು.
ಪ್ರತಿ ಸದಸ್ಯರು ಮನೆಮನೆಗೆ ಭೇಟಿ ನೀಡಿದ ಮಾಹಿತಿಯನ್ನು ವಾರ್ ರೂಂಗೆ ವಿಡಿಯೋ ಸಮೇತ ಪುರಾವೆ ಕಳುಹಿಸಬೇಕು. ಎಷ್ಟು ಮನೆಗೆ ಭೇಟಿ ನೀಡಿದ್ದೀರ ಎಂಬ ಕರಾರುವಾಕ್ಕಾದ ಲೆಕ್ಕದ ಕಡೆ ನಾವು ನಿಗಾ ವಹಿಸುತ್ತೇವೆ ಎಂದು ಎಚ್ಚರಿಸಿದರು. ಚುನಾವಣೆ ನಂತರ ನಾವು ಇವುಗಳ ಪ್ರಗತಿಪರಿಶೀಲನೆ ನಡೆಸುವುದಾಗಿ ತಿಳಿಸಿದರು.




