ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಭೇಟಿ: ಸಿದ್ಧತೆಗಳ ಪರಿಶೀಲನೆ
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ ಮತಗಳ ಎಣಿಕೆ ಕಾರ್ಯ ನ.23 ರಂದು ಬೆಳಿಗ್ಗೆ 08 ಗಂಟೆಯಿಂದ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರುಗಲಿದ್ದು, ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಸಿದ್ಧತೆಗಳ ಕುರಿತು ಪರಿಶೀಲಿಸಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ನ.23 ರಂದು ಬೆಳಿಗ್ಗೆ 08 ಗಂಟೆಗೆ ಮತ ಎಣಿಕಾ ಕಾರ್ಯ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಸ್ಟ್ರಾಂಗ್ ರೂಂಗಳನ್ನು ತೆರೆಯುವುದು, ಪೋಸ್ಟಲ್ ಬ್ಯಾಲೆಟ್ಗಳ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳುವುದು, ಮತ ಎಣಿಕಾ ಕಾರ್ಯ ನೆರವೇರಿಸುವ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಮತ್ತು ಏಜೆಂಟರುಗಳ ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈಗಾಗಲೇ ಮತ ಎಣಿಕಾ ಕೊಠಡಿಗಳನ್ನು ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಜರಿದ್ದರು.



