ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ ಅವರ ಹೇಳಿಕೆ ದಾಖಲಿಸಿಕೊಂಡಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪ್ರಕರಣದ ಎರಡನೇ ಆರೋಪಿಯಾಗಿರುವ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ವಿಚಾರಣೆಗೆ ಹಾಜರಾದ ಪಾರ್ವತಮ್ಮ ಲೋಕಿಯುಕ್ತರ ಹಲವು ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಈ ಹೇಳಿಕೆಯನ್ನು ದಾಖಲಿಸಿಕೊಂಡು ಕಡತಗಳೊಂದಿಗೆ ಪರಿಶೀಲನೆ ಮಾಡುತ್ತಿರುವ ಲೋಕಾಯುಕ್ತ ಪೊಲೀಸರು ಇದೀಗ ಸಿದ್ದರಾಮಯ್ಯ ಅವರಿಗೂ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲನೇ ಆರೋಪಿಯಾಗಿದ್ದು, ಅವರನ್ನುವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ.
ಪ್ರಕರಣದ ಎರಡನೇ ಆರೋಪಿಯಾಗಿರುವ ಪಾರ್ವತಮ್ಮ, ಮೂರನೇ ಆರೋಪಿಯಾಗಿರುವ ಮಲ್ಲಿಕಾರ್ಜುನ ಸ್ವಾಮಿ ಮತ್ತು ನಾಲ್ಕನೇ ಆರೋಪಿಯಾದ ದೇವರಾಜು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಈಗ ಬಾಕಿ ಇರುವುದು ಮೊದಲ ಆರೋಪಿ ವಿಚಾರಣೆ ಮಾತ್ರ. ಅಂದರೆ ಮೊದಲ ಆರೋಪಿಯಾದ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಿದ್ದಾರೆ.
ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸುವುದು ಇಲ್ಲವೇ, ಬಂಧಿಸುವುದು ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೇಳಿತ್ತು. ಸಿದ್ದರಾಮಯ್ಯ ಅವರ ಮೇಲೆ ಆರೋಪ ಕೇಳಿ ಬಂದ ಕಾರಣ ವಿಚಾರಣೆಗೆ ಎದುರಾಗುವುದು ಅನಿವಾರ್ಯವಾಗಿದೆ.




