ಬಳ್ಳಾರಿ: ಮಹಿಳಾ ಅಭಿವೃದ್ಧಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುವ ಸಮುದಾಯಗಳಲ್ಲಿ ಅದರಿಂದಾಗುವ ದುಷ್ಪರಿಣಾಮ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಾಗ ಅಧಿಕಾರಿಗಳು ಪೊಲೀಸರು ಹಾಗೂ ಇತರೆ ಇಲಾಖೆ ಅಧಿಕಾರಿಗಳ ಸಹಕಾರ ಪಡೆದು ಬಾಲ್ಯ ವಿವಾಹ ತಡೆಗಟ್ಟಬೇಕು. ಈ ಕುರಿತು ಅಧಿಕಾರಿಗಳು ಸಮನ್ವತೆ ಸಾಧಿಸಬೇಕು ಎಂದರು.
ಶಾಲಾ ಕಾಲೇಜುಗಳಲ್ಲಿ ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸಬೇಕು. ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ, ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸಬೇಕು ಎಂದರು.
ಶಾಲೆಯಲ್ಲಿ ಮಕ್ಕಳು ತಮ್ಮ ಮೇಲಿನ ದೌರ್ಜನ್ಯವನ್ನು ಹೇಗೆ ತಡೆಗಟ್ಟಬಹುದು. ಬ್ಯಾಡ್ ಟಚ್ ಅಂದರೇನು? ಗುಡ್ ಟಚ್ ಅಂದರೇನು? ಯಾರಾದಾರೂ ಬ್ಯಾಡ್ ಟಚ್ ಮಾಡಿದರೆ ಅದನ್ನು ಹೇಗೆ ಗುರುತಿಸಬೇಕು. ಅವುಗಳನ್ನು ತಡೆಗಟ್ಟಲು ಮಕ್ಕಳು ಏನು ಮಾಡಬೇಕು ಎಂಬುದರ ಮಾಹಿತಿ ಮಕ್ಕಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಡಿಡಿಪಿಐ ಅಧಿಕಾರಿಗಳಿಗೆ ತಿಳಿಸಿದರು.
ಪೋಷಕರು ಇಲ್ಲದ ಮಕ್ಕಳನ್ನು ಗುರುತಿಸಿ, ಸರ್ಕಾರಿ ಬಾಲ ಮಂದಿರದಲ್ಲಿ ದಾಖಲಾತಿ ಪಡೆದುಕೊಳ್ಳಬೇಕು. ಅಂತಹ ಮಕ್ಕಳು ಕಂಡುಬಂದಲ್ಲಿ ಸರ್ಕಾರಿ ಬಾಲ ಮಂದಿರಕ್ಕೆ ನೋಂದಾಯಿಸಲು ಸಾರ್ವಜನಿಕರಲ್ಲಿ ಮನವರಿಕೆ ಮಾಡಿಕೊಡಬೇಕು ಎಂದರು.
ದೈಹಿಕ ಹಾಗೂ ಮಾನಸಿಕವಾಗಿ ಕೌಟುಂಬಿಕ ಹಿಂಸೆಯಿಂದ ಬಳಲುತ್ತಿರುವ ಮಹಿಳೆಯರಿಗಾಗಿ ಮಹಿಳಾ ಸಂರಕ್ಷಣೆ ಅಧಿನಿಯಮ 2005 ಕಾಯ್ದೆ ಜಾರಿಯಲ್ಲಿದ್ದು, ಈ ಕಾಯ್ದೆ ಕುರಿತು ಗ್ರಾಮಾಂತರ ಪ್ರದೇಶದವರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕು ಎಂದರು.
ಶೋಷಣೆಗೆ ಒಳಗಾಗುವ ಮಹಿಳೆಯರ ಸಮಸ್ಯೆಗಳನ್ನು ಕೌನ್ಸೆಲಿಂಗ್ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು. ಈ ಕಾಯ್ದೆ ಬಗ್ಗೆ ಗ್ರಾಮಾಂತರ ಪ್ರದೇಶದ ಮಹಿಳೆಯರಲ್ಲಿ ಅರಿವು ಮೂಡಿಸಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಸಹಕಾರ ಪಡೆಯಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.




