ಬೆಂಗಳೂರು: ಕರ್ನಾಟಕ ಸರ್ಕಾರದಿಂದ 2020-21 ನೇ ಸಾಲಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗಿರುತ್ತದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಕಾಡೆಮಿಯ ವತಿಯಿಂದ ಬಂಜಾರ ಸಂಸ್ಕೃತಿ, ಭಾಷೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದಂತೆ ವೈವಿಧ್ಯಮಯವಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಬಂಜಾರ ಸಮುದಾಯದ ಸಂಪ್ರದಾಯಗಳು, ಆಚಾರ ವಿಚಾರಗಳು ಹಾಗೂ ವೇಷಭೂಷಣಗಳು ಇತ್ಯಾದಿ ಸಮಗ್ರ ವಿಷಯಗಳನ್ನು ಒಳಗೊಂಡ ಲೋಗೋವನ್ನು ರಚಿಸಬೇಕಾಗಿರುತ್ತದೆ.
ಆಸಕ್ತ ಕಲಾವಿದರು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ಸೂಕ್ತವಾಗುವಂತಹ ಒಂದು ಲೋಗೋವನ್ನು (03 ವಿಭಿನ್ನ ರೀತಿಯಲ್ಲಿ ರಚಿಸುವುದು) ರಚಿಸಿ ದಿನಾಂಕ: 15.11.2024ರ ಒಳಗಾಗಿ ಖುದ್ದಾಗಿ ಅಕಾಡೆಮಿಯ ಕಚೇರಿಗೆ ತಲುಪಿಸಲು ಕೋರಿದೆ.
ಆಯ್ಕೆಯಾದ ಲೋಗೋ ಒಂದಕ್ಕೆ ಅಕಾಡೆಮಿಯಿಂದ ರೂ.25,000/- ಗಳ ಬಹುಮಾನವನ್ನು ನೀಡಲಾಗುವುದು. ಲೋಗೋ ಆಯ್ಕೆ ಮಾಡುವಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ.




