ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ
ಧಾರವಾಡ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಅಡಿ 2024-25 ನೇ ಸಾಲಿನ ಹಿಂಗಾರು ಹಂಗಾಮಿಗೆ ಧಾರವಾಡ ಜಿಲ್ಲೆಯಲ್ಲಿ ಕೈಗೊಂಡಿರುವ ಬೆಳೆ ಕಟಾವು ಪ್ರಯೋಗದ ಸಮೀಕ್ಷೆ ಕಾರ್ಯದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಪಾಲ್ಗೊಂಡಿದ್ದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮ ಪಂಚಾಯತಿ ವಿಮಾ ಘಟಕದ ವ್ಯಾಪ್ತಿಯ ಬ್ಯಾಲಾಳ ಗ್ರಾಮದ ರೈತ ಶಿವರೆಡ್ಡಿ ಭೀಮರೆಡ್ಡಿ ಹೆಬ್ಬಾಳ ಇವರ ಸರ್ವೆ ನಂ: 138 ರ ಜಮೀನದಲ್ಲಿರುವ ಕಡಲೆ (ಮಳೆ ಆಶ್ರಿತ) ಬೆಳೆಯ ಬೆಳೆ ಕಟಾವು ಪ್ರಯೋಗದ ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆಯನ್ನು ಜಿಲ್ಲಾಧಿಕಾರಿಗಳು ಮಾಡಿದರು.
ಗ್ರಾಮ ಪಂಚಾಯತ ಮಟ್ಟಕ್ಕೆ ಜೋಳ (ಮಳೆ ಆಶ್ರಿತ), ಕಡಲೆ (ಮಳೆ ಆಶ್ರಿತ) ಬೆಳೆಗಳ ಒಟ್ಟು 237 ಹಾಗೂ ಹೋಬಳಿ ಮಟ್ಟಕ್ಕೆ ಜೋಳ(ನೀ), ಮುಸುಕಿನಜೋಳ(ನೀ), ಗೋಧಿ(ಮಳೆ ಆಶ್ರಿತ), ಗೋಧಿ(ನೀ), ಕಡಲೆ(ಮಳೆ ಆಶ್ರಿತ), ಕಡಲೆ(ಮಳೆ ಆಶ್ರಿತ), ಕಡಲೆ(ನೀ), ಕುಸುಮೆ(ಮಳೆ ಆಶ್ರಿತ), ಹೆಸರು(ಮಳೆ ಆಶ್ರಿತ), ಹುರುಳಿ(ಮಳೆ ಆಶ್ರಿತ), ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ(ನೀ) ಬೆಳೆಗಳ ಒಟ್ಟು 65 ಸೇರಿದಂತೆ ಒಟ್ಟು 302 ವಿಮಾ ಘಟಕಗಳಿಗೆ ಮತ್ತು ಹತ್ತಿ (ಮಳೆ ಆಶ್ರಿತ), ಸೋಯಾಬಿನ್(ನೀ), ಸಾವೆ(ಮಳೆ ಆಶ್ರಿತ) ಬೆಳೆಗಳ 06 ಹೋಬಳಿಗಳನ್ನು ಸೇರಿದಂತೆ ಒಟ್ಟು 1658 ಬೆಳೆ ಕಟಾವು ಪ್ರಯೋಗಗಳ ಕಾರ್ಯಯೋಜನಾ ಪಟ್ಟಿಯನ್ನು ಅನುಮೋದಿಸಲಾಗಿದೆ. ಸದರಿ ಬೆಳೆ ಕಟಾವು ಪ್ರಯೋಗಗಳು ನಮೂನೆ-1 ಮತ್ತು ನಮೂನೆ-2 ರಲ್ಲಿ ಪ್ರಗತಿಯಲ್ಲಿವೆ.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಶೀಲ್ದಾರ ಸುಧೀರ ಸಾಹುಕಾರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ವೀರನಗೌಡ ಪಾಟೀಲ, ತಾಲೂಕಾ ಯೋಜನಾಧಿಕಾರಿಗಳು, ಸಹಾಯ ಸಾಂಖ್ಯಿಕ ಅಧಿಕಾರಿಗಳು, ಸಾಂಖ್ಯಿಕ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮದ ರೈತರು ಹಾಗೂ ಎಐಸಿ ವಿಮಾ ಕಂಪನಿಯ ಜಿಲ್ಲಾ ಕೋ-ಆರ್ಡಿನೇಟರ್ ಹಾಜರಿದ್ದರು.




