ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಮತ್ತೆ ಜೈಲೇ ಗತಿಯಾಗಿದೆ. ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರು ವಾದ ಮಾಡಲು ಸಮಯ ಕೇಳಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಎಸ್ಪಿಪಿ ಕೋರ್ಟ್ ಹಾಲ್ನಲ್ಲಿ ನಡೆದ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ಅವರನ್ನು ಕರೆಸುವಂತೆ ನ್ಯಾಯಾಧೀಶರು ಸೂಚಿಸಿದರು. ರವಿಶಂಕರ್ ಅರ್ಜಿ ವಿಚಾರಣೆಗೂ ಎಸ್ಎಸ್ಪಿ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅವರ ಹಾಜರಾತಿಗೆ ನ್ಯಾಯಾಲಯ ಸೂಚಿಸಿತು. ಇದಕ್ಕಾಗಿ ಕೆಲಕಾಲ ವಿಚಾರಣೆ ಮುಂದೂಡಲಾಯಿತು.
ನಂತರ ಶುರುವಾದ ಪವಿತ್ರಗೌಡ ಗೌಡ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್ಪಿಪಿ ಪರ ವಕೀಲರು 15 ದಿನಗಳ ಸಮಯಾವಕಾಶ ಕೇಳಿದರು. ಸಮಯಾವಕಾಶ ನೀಡಲು ಆಗಲ್ಲ, ಇವತ್ತೇ ನಿಮ್ಮ ಸಿನಿಯರ್ ವಕೀಲರನ್ನು ಕರೆಸಿ ಎಂದು ನ್ಯಾಯಾಧೀಶರು ಸೂಚಿಸಿ, ಜಾಮೀನು ಅರ್ಜಿಯನ್ನು ಕೆಲ ಕಾಲ ಮುಂದೂಡಿದರು. ಬಳಿಕ ಅಕ್ಟೋಬರ್ 4ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಈಗಾಗಲೆ ದರ್ಶನ್, ಲಕ್ಷ್ಮಣ್ ಜಾಮೀನು ಅರ್ಜಿಯನ್ನು ಅ. 4ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಸದ್ಯ ಪವಿತ್ರಾ ಗೌಡ ಅರ್ಜಿ ವಿಚಾರಣೆ ಕೂಡ ಮುಂದೂಡಿಕೆ ಮಾಡಿ ನ್ಯಾಯಾಧೀಶ ಶ್ರೀ ಜೈಶಂಕರ್ ಆದೇಸಿದ್ದಾರೆ.




