ಬೆಂಗಳೂರು: ಕನ್ನಡದ ಬಹು ಬೇಡಿಕೆಯ ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್. ಇವರ ಅಭಿನಯದ ಡಬ್ಬಿಂಗ್ ಸಿನಿಮಾಗಳು ಉತ್ತರ ಭಾರತದಲ್ಲಿ ಸಾಕಷ್ಟು ಹಣ ಮಾಡುತ್ತಿವೆ. ಅಲ್ಲೆಲ್ಲಾ ದರ್ಶನ್ ಯಾರು ಅಂತಾ ಗೊತ್ತಿಲ್ಲ. ಆದರೆ ಅವರ ಸಿನಿಮಾಗಳು ಮಾತ್ರ ಭಾರಿ ಫೇಮಸ್.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪ್ರತಿ ಸಿನಿಮಾಗೆ ಕೋಟಿಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟ ದರ್ಶನ್ ಅತ್ಯಂತ ಐಷಾರಾಮಿ ಜೀವನ ನಡೆಸುತ್ತಿದ್ದರು. ಸಮಯಕ್ಕೆ ಸರಿಯಾಗಿ ಊಟ, ತಿಂಡಿ, ಜಿಮ್, ನಿದ್ರೆ, ಪಾರ್ಟಿ ಅಂತೆಲ್ಲಾ ಜೀವನ ಎಂಜಾಯ್ ಮಾಡುತ್ತಿದ್ದ ದರ್ಶನ್ ಇದೀಗ ಪರಪ್ಪನ ಅಗ್ರಹಾರ ಜೈಲಿನ ನಾಲ್ಕು ಗೋಡೆ ಮಧ್ಯೆ ಜೈಲೂಟ ಸೇವಿಸುತ್ತಾ ಒಂಟಿಯಾಗಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ.
ಗೆಳತಿ ಪವಿತ್ರ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರು ಅಶ್ಲೀಲ ಮೆಸೇಜ್ ಕಳಿಸಿದ್ದರು ಎಂಬ ಕಾರಣಕ್ಕೆ ತಮ್ಮ ಗೆಳೆಯರೊಂದಿಗೆ ಸೇರಿ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಜೈಲು ಪಾಲಾಗಿದ್ದಾರೆ. ಕೋರ್ಟ್ ಈ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಇಬ್ಬರೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗಳಾಗಿ ಕಾಲ ಕಳೆಯುತ್ತಿದ್ದಾರೆ.
ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಜೈಲುವಾಸ ನರಕವಾಗಿ ಪರಿಣಮಿಸಿದೆ. ಜೈಲಿನಲ್ಲಿ ಚಾಪೆಯಲ್ಲಿ ನಿದ್ರಿಸಲಾಗದೆ ದರ್ಶನ್ ಮತ್ತು ಪವಿತ್ರಾ ಗೌಡ ಚಡಪಡಿಸುತ್ತಿದ್ದಾರೆ. ಜೊತೆಗೆ ಸೊಳ್ಳೆಗಳ ಕಾಟದಿಂದ ಮತ್ತಷ್ಟು ಹೈರಾಣಾಗಿದ್ದಾರೆ ಎಂದು ತಿಳಿದುಬಂದಿದೆ.
ಜೈಲಿನಲ್ಲಿ ಸರಿಯಾಗಿ ಉಪ್ಪು- ಕಾರ ಇಲ್ಲದ ಸಾಂಬಾರ್, ಮುದ್ದೆ, ಅನ್ನ ತಿನ್ನಲು ಕಷ್ಟಪಡುತ್ತಿದ್ದಾರೆ. ಜೈಲಿನ ಮೇನು ಪ್ರಕಾರ ಇಬ್ಬರಿಗೂ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಜೈಲು ಸಿಬ್ಬಂದಿ ನೀಡುತ್ತಿದ್ದರು. ಆದರೆ ದರ್ಶನ್ ಜೈಲೂಟ ತಿನ್ನಲಾಗದೆ ಪರದಾಡುತ್ತಿದ್ದಾರೆ ಎಂದು ವರದಿಯಾಗಿದೆ.
ರಾತ್ರಿ ಬೇಗ ಮಲಗಿದರೂ ಪದೇ ಪದೇ ಎಚ್ಚರಗೊಂಡಿದ್ದು, ನಿನ್ನೆ ರಾತ್ರಿ ನೀಡಿದ ಮುದ್ದೆ, ಅನ್ನ, ಚಪಾತಿ, ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಒಲ್ಲದ ಮನಸ್ಸಿನಿಂದ ಸೇವಿಸಿದ್ದು, ಉಪ್ಪು ಕಾರ ರುಚಿ ಇಲ್ಲದ ಅರೆಬೆಂದ ಊಟ ಒಗ್ಗುತ್ತಿಲ್ಲ ಎಂದು ಹೇಳಿದರು ಎಂದು ತಿಳಿದು ಬಂದಿದೆ.
ಸಹಖೈದಿಗಳ ಜೊತೆ ಬೇರೆಯದೆ ಇಬ್ಬರೂ ಮೌನಕ್ಕೆ ಶರಣಾಗಿದ್ದಾರೆ. ಮುಂಜಾನೆ ಬೇಗ ಎದ್ದು ಕಾಫಿ ಕುಡಿದ ನಂತರ ಪೇಪರ್ ಓದಿದ್ದನ್ನು ಬಿಟ್ಟರೆ ಬೇರೆ ಯಾವುದೇ ಚಟುವಟಿಕೆ ಇಲ್ಲದೆ ಕಾಲ ಕಳೆಯುತ್ತಿದ್ದಾರೆ ಎನ್ನಲಾಗಿದೆ.




