ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡರಿಗೆ ಸನ್ಮಾನ
ಕ್ಯಾನ್ಸರ್ ತಪಾಸಣಾ ಶಿಬಿರ
ಮಂಡ್ಯ: ಪಾಂಡವಪುರದಲ್ಲಿ ಶಂಭುಲಿಂಗೇಶ್ವರ ಪಿಯು ಕಾಲೇಜು ಆಯೋಜಿಸಿದ್ದ ರನ್ ಫಾರ್ ಲೈಫ್ ಕ್ಯಾನ್ಸರ್ ಜಾಗೃತಿ ಮ್ಯಾರಾಥಾನ್ – 2026 ರಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗಿಯಾದರು. ಮ್ಯಾರಾಥಾನ್ ನಲ್ಲಿ ನೂರಾರು ನಾಗರಿಕರು ಹೆಜ್ಜೆ ಹಾಕುವ ಮೂಲಕ ಕ್ಯಾನ್ಸರ್ ಜಾಗೃತಿ ಮೂಡಿಸಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕ್ಯಾನ್ಸರ್ ಜಾಗೃತಿಯ ಭಾಗವಾಗಿ ಭಾರತಿ ಆಸ್ಪತ್ರೆ ವತಿಯಿಂದ ಉಚಿತ ಕ್ಯಾನ್ಸರ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ನಾಗರಿಕರು ಸ್ವಯಂಪ್ರೇರಿತರಾಗಿ ಈ ಕ್ಯಾನ್ಸರ್ ಆರೋಗ್ಯ ತಪಸಾಣಾ ಶಿಬಿರದಲ್ಲಿ ಭಾಗವಹಿಸಿದರು.
ಇನ್ನು ಶಿಬಿರದಲ್ಲಿ ೨೦೨೬ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ ಅಂಕೇಗೌಡ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ಮ್ಯಾರಾಥಾನ್ ನಲ್ಲಿ ವಿಜೇತರಿಗೆ ನಗದು ಪುರಸ್ಕಾರವನ್ನು ನೀಡಲಾಯಿತು.














