ಐದು ಹುಲಿಗಳ ಸಾವು : ನಾಡಿನ ಘೋರ ದುರಂತ

12 months ago

ಅಧಿಕಾರಿಗಳ ಅಮಾನತಿಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ

ಬೆಂಗಳೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಮೀನ್ಯಂ ಅರಣ್ಯದಲ್ಲಿ ದುಷ್ಕರ್ಮಿಗಳ ವಿಷ ಪ್ರಾಶನಕ್ಕೆ ಐದು ಹುಲಿಗಳು ಮೃತಪಟ್ಟಿದ್ದು ಇದು ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದ ಅತಿ ದೊಡ್ಡ ದುರಂತವಾಗಿದೆ. ಈ ಹುಲಿಗಳ ಸಾವಿನ ತನಿಖೆ ಮಾಡಲು ವಿಶೇಷ ತಂಡವನ್ನು ರಚಿಸಬೇಕೆಂದು ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಮತ್ತು ಸಾವಿಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಹಾಗೂ ಸಂಚಾಲಕ ಟಿ.ರುದ್ರಮುನಿ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರಿಗೆ ಆಗ್ರಹಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿ, ಕಾಂಡಚಿನ ಗ್ರಾಮಗಳ ಜನರ ಧ್ವೇಷಕ್ಕೆ ಅತಿ ಅಪರೂಪದ ಹುಲಿ ಕುಟುಂಬವೇ ಸರ್ವನಾಶವಾಗಿದೆ.  ತಾಯಿ ಮತ್ತು ನಾಲ್ಕು ಹುಲಿಗಳ ಘೋರ ಸಾವು ವನ್ಯಜೀವಿ ಸಂರಕ್ಷಣಾ ಯೋಜನೆಗೆ ದೊಡ್ಡ ಹೊಡೆತವಾಗಿದೆ.  ಕರ್ನಾಟಕ ರಾಜ್ಯ ದೇಶದಲ್ಲಿಯೇ ಹುಲಿಗಳ ಸಂಖ್ಯೆಯಲ್ಲಿ ೨ ನೇ ಸ್ಥಾನದಲ್ಲಿದೆ. ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದಿದ್ದಾರೆ.

ಈ ಹುಲಿಗಳ ಸಾವಿನ ತನಿಖೆ ಮಾಡಲು ವಿಶೇಷ ತಂಡವನ್ನು ರಚಿಸಬೇಕೆಂದು ಮತ್ತು ನಿರ್ಲಕ್ಷ್ಯವಹಿಸಿದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಮತ್ತು ಸಾವಿಗೆ ಕಾರಣರಾದವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಮನವಿ ಮಾಡಿದ್ದಾರೆ.

Leave a Reply