ಎಲ್ಲರಿಗೂ ನಮಸ್ಕಾರ, ನಿಮಗೆಲ್ಲ ತಿಳಿದಿರುವ ಹಾಗೆ, ಹಲವು ವರ್ಷಗಳಿಂದ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಅಂತೆಯೇ ಈ ಬಾರಿಯೂ ಕೂಡ ನನ್ನ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದೇನೆ. ಪ್ರತಿವರ್ಷದಂತೆ ಈ ವರ್ಷವೂ ಸಹ ನಿಮ್ಮ ಸಹಕಾರ, ಪ್ರೀತಿ ಹಾಗೂ ತಾಳ್ಮೆ ನನ್ನೊಂದಿಗೆ ಹೀಗೇ ಇರಲಿ ಎಂದು ಕೇಳಿಕೊಳ್ಳುತ್ತೇನೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈಗಾಗಲೇ ಅನೇಕ ಆತ್ಮೀಯರು ಹುಟ್ಟುಹಬ್ಬವನ್ನು ಆಚರಿಸಲು ತಯಾರಿ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ದಯಮಾಡಿ ಇಂತಹ ಆಚರಣೆಗಳಿಗೆ ನಿಮ್ಮ ಶ್ರಮ ಹಾಕಬಾರದು ಎಂದು ಕೇಳಿಕೊಳ್ಳುತ್ತೇನೆ, ನಿಮ್ಮ ಪ್ರೀತಿ, ಹಾರೈಕೆ, ಅಭಿಮಾನವೇ ನನಗೆ ಸಮ್ಮಾನ, ಸಂಭ್ರಮ.
ನೀವು ಮಾಡಲೇಬೇಕು ಎಂದು ನಿರ್ಧರಿಸಿದ್ದರೆ, ನಿಮ್ಮ ಪರಿಶ್ರಮವು ಬಡ ಜನರಿಗೆ, ಶೋಷಿತರಿಗೆ, ಸಂಕಷ್ಟದಲ್ಲಿರುವ ಜನರಿಗೆ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ರೀತಿಯಲ್ಲಿ ಇರಲಿ ಎಂದು ನಿಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ.
ನಿಮ್ಮ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಹಾಗೂ ನಮ್ಮ ಕುಟುಂಬ ಸದಾ ಚಿರಋಣಿಯಾಗಿರಲಿದೆ. ಧನ್ಯವಾದಗಳು.
ಇಂತಿ ನಿಮ್ಮ
ಪ್ರಿಯಾಂಕ್ ಖರ್ಗೆ




