ಧಾರವಾಡ: ಧಾರವಾಡ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಧಾರವಾಡ ಸೈದಾಪೂರದ ಸರ್ಕಾರಿ ವಸತಿ ಶಾಲೆಯಲ್ಲಿನ ಖಾಲಿ ಇರುವ ಸ್ಥಾನಗಳಿಗೆ ಅನುಗುಣವಾಗಿ ಭರ್ತಿ ಮಾಡಲು 01 ನೇ ತರಗತಿಯಿಂದ 05 ನೇ ತರಗತಿವರೆಗಿನ ಅರ್ಹ ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸರ್ಕಾರಿ ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಉಚಿತ ಊಟ-ಉಪಹಾರ, ವಸತಿ, ಪಠ್ಯ ಪುಸ್ತಕ, ಲೇಖನ ಸಾಮಗ್ರಿ, ಶುಚಿ ಸಂಭ್ರಮ ಕಿಟ್, ಸಮವಸ್ತ್ರ, ಶೂ ಮತ್ತು ಸಾಕ್ಸ್, ಸ್ಕೂಲ್ ಬ್ಯಾಗ್, ಉತ್ತಮ ಕೌಶಲ್ಯಯುಕ್ತ ಭೋಧಕರಿಂದ ತರಗತಿ ಭೋದನೆ ಹಾಗೂ ಸರ್ಕಾರದಿಂದ ಕಾಲೋಚಿತವಾಗಿ ಲಭ್ಯವಾಗುವ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು.
ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಭೇಟಿ ನೀಡಬಹುದು.




