ಧಾರವಾಡ: ಧಾರವಾಡ ನಗರದ ಅನುದಾನಿತ ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಿಂದಕ್ಕೆ ಪಡೆದು, ಆದೇಶ ಹೋರಡಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ಮಕ್ಕಳು ಪ್ರವೇಶ ಪಡೆಯದಂತೆ ಹಾಗೂ ಈಗಿರುವ ಮಕ್ಕಳು ಬೇರೆ ಕಡೆಗೆ ಪ್ರವೇಶ ಪಡೆಯಲು ಸಂಬಂಧಪಟ್ಟವರಿಗೆ ತಿಳಿಸಲಾಗಿದೆ.
ಒಂದು ವೇಳೆ ಈ ಶಾಲೆಯಲ್ಲಿ ಪ್ರವೇಶ ಪಡೆದಲ್ಲಿ ಅಥವಾ ಮಕ್ಕಳಿಗೆ ಅಲ್ಲಿಯೇ ಶಿಕ್ಷಣ ಮುಂದುವರಿಸಿದಲ್ಲಿ ಇಲಾಖೆಯು ಮುಂದಿನ ಆಗುಹೋಗುಗಳಿಗೆ ಜವಾಬ್ದದಾರಿಯಾಗಿರುವುದಿಲ್ಲ. ಸಂಬಂಧಪಟ್ಟ ಪಾಲಕರೇ ಜವಾಬ್ದಾರರು ಎಂದು ಧಾರವಾಡ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




