ಬಿ.ಆರ್.ಗವಾಯಿ ಕುರಿತು ಅವಹೇಳನಕಾರಿ ಕಾಮೆಂಟ್: ಎಫ್ಐಆರ್ ದಾಖಲು
8 months ago
ಬೆಂಗಳೂರು: ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ ಐದು ಖಾತೆಗಳ ವಿರುದ್ಧ ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್ ಎಂ.ಸಿ ಮಂಜು ಹೆಸರಿನ ಖಾತೆಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ 67, 66 ಹಾಗೂ 66(C), ಭಾರತೀಯ ನ್ಯಾಯ ಸಂಹಿತೆ 352ರಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇತ್ತೀಚಿನ ಪ್ರಕರಣವೊಂದರ ಕುರಿತು ಪೋಸ್ಟ್ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂತಹ ಕಾಮೆಂಟ್ ಪ್ರಕಟಿಸಿದ್ದರು. ಇದನ್ನು ಗಮನಿಸಿದ್ದ ಸೈಬರ್ ಕ್ರೈಮ್ನ ಸಾಮಾಜಿಕ ಜಾಲತಾಣ ವಿಭಾಗದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಬಿ.ಆರ್.ಗವಾಯಿ ಕುರಿತು ಅವಹೇಳನಕಾರಿ ಕಾಮೆಂಟ್: ಎಫ್ಐಆರ್ ದಾಖಲು
8 months ago
ಬೆಂಗಳೂರು: ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ ಐದು ಖಾತೆಗಳ ವಿರುದ್ಧ ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್ ಎಂ.ಸಿ ಮಂಜು ಹೆಸರಿನ ಖಾತೆಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ 67, 66 ಹಾಗೂ 66(C), ಭಾರತೀಯ ನ್ಯಾಯ ಸಂಹಿತೆ 352ರಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇತ್ತೀಚಿನ ಪ್ರಕರಣವೊಂದರ ಕುರಿತು ಪೋಸ್ಟ್ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂತಹ ಕಾಮೆಂಟ್ ಪ್ರಕಟಿಸಿದ್ದರು. ಇದನ್ನು ಗಮನಿಸಿದ್ದ ಸೈಬರ್ ಕ್ರೈಮ್ನ ಸಾಮಾಜಿಕ ಜಾಲತಾಣ ವಿಭಾಗದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
Share this:
Like this:
Join Our WhatsApp Group
ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
Share this post:
Related Posts
ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ
ಕ್ಯಾನ್ಸರ್ ವೇದನೆ ತಾಳಲಾರದೆ ಖ್ಯಾತ ವೈದ್ಯ ಆತ್ಮಹತ್ಯೆ; ಬೆಳಗಾವಿಯಲ್ಲಿ ಮನಕಲಕುವ ಘಟನೆ
ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ನೇಣಿಗೆ ಶರಣು
ದಾದನಟ್ಟಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ