ಬೆಂಗಳೂರು: ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120 ರಿಂದ 150 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಬಿಜೆಪಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಳೆದೆರಡು ವರ್ಷಗಳಲ್ಲಿ ಬೆಂಗಳೂರಿನಲ್ಲಾಗಿರುವ ಮಳೆ ಹಾನಿ, ರಸ್ತೆ ಗುಂಡಿ, ಕಾಮಗಾರಿ ಸ್ಥಗಿತ, ಉದ್ಯಾನಗಳಲ್ಲಿ ಸಿಬ್ಬಂದಿಗೆ ವೇತನ ವಿಳಂಬ ಮೊದಲಾದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಚರ್ಚಿಸಲಾಗಿದೆ. ಬೆಂಗಳೂರಿನ ಅಭಿವೃದ್ಧಿ ಕುಂಠಿತವಾಗಿ ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಲೆ ಏರಿಕೆಯ ಹೊರೆಯನ್ನು ಜನರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಬೆಂಗಳೂರಿಗೆ ಹೆಚ್ಚು ಅನುದಾನ ನೀಡಿ ಎಂದು ಆಗ್ರಹಿಸಲಾಗಿದೆ ಎಂದರು.
ರಾಜ್ಯದ ಬಿಜೆಪಿ ಶಾಸಕರು ಹಾಗೂ ಉತ್ತರ ಕರ್ನಾಟಕದ ಶಾಸಕರು ಕಣ್ಣೀರು ಹಾಕುತ್ತಿದ್ದಾರೆ. ಅಭಿವೃದ್ಧಿಗಾಗಿ ಶಾಸಕರಿಗೆ ಅನುದಾನ ಮಂಜೂರು ಮಾಡಬೇಕು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ತಾರತಮ್ಯವಿಲ್ಲದೆ ನೂರಾರು ಕೋಟಿ ರೂ. ಅನುದಾನ ನೀಡಲಾಗಿತ್ತು. ಈಗ ತಾರತಮ್ಯ ಏಕೆ ಮಾಡಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120-150 ಕೋಟಿ ರೂ. ಅನುದಾನ ನೀಡಿ ಎಂದು ಕೇಳಿದ್ದೇವೆ. ಅನುದಾನ ನೀಡಿದರೆ ಶಾಸಕರು ಎರಡು ವರ್ಷ ಉತ್ತಮವಾಗಿ ಕೆಲಸ ಮಾಡಬಹುದು ಎಂದರು.
ಕೇವಲ ಬಿಜೆಪಿ ಮಾತ್ರವಲ್ಲದೆ, ಅಭಿವೃದ್ಧಿ ಬಗ್ಗೆ ಜನರೇ ಹೇಳುತ್ತಿದ್ದಾರೆ. ಮೆಟ್ರೊ ದರ ಏರಿಕೆಯ ವಿರುದ್ಧ ಜನರೇ ಪ್ರತಿಭಟನೆ ಮಾಡಿದ್ದಾರೆ. ಬಜೆಟ್ ಅಧಿವೇಶನದಲ್ಲಿ ನಾವ್ಯಾರೂ ಅಡ್ಡಿ ಮಾಡದೆ ಎಲ್ಲಕ್ಕೂ ಸಹಕಾರ ನೀಡುತ್ತೇವೆ. ಆದರೆ ಸರಿಯಾಗಿ ಅನುದಾನ ನೀಡಲಿ ಎಂದರು.



