ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು ನೇತ್ರಾವತಿ ನದಿಯ ತಟದಲ್ಲಿ ಸ್ಥಳ ಮಹಜರು ಆರಂಭಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಎಸ್ಐಟಿ ವಿಚಾರಣೆ ವೇಳೆ ದೂರುದಾರ, ತಲೆ ಬುರುಡೆಯನ್ನು ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಹೊರತೆಗೆದಿರುವುದಾಗಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಫೊರೆನ್ಸಿಕ್ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸ್ಥಳ ಮಹಜರು ಕೈಗೊಂಡರು.
ಎಸ್ಐಟಿ ಎಸ್ಪಿ ಸಿ.ಎ.ಸೈಮನ್ ನೇತೃತ್ವದಲ್ಲಿ ದೂರುದಾರನನ್ನು ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು ನಡೆಸಿದರು.
ದೂರುದಾರ ಶವಗಳನ್ನು ಹೂತಿರುವುದಾಗಿ ಹೇಳಿರುವ ಎಲ್ಲಾ ಸ್ಥಳಗಳನ್ನು ಎಸ್ಐಟಿ ಅಧಿಕಾರಿಗಳಾದ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್, ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಸೇರಿ ಇನ್ನಿತರರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದರು.
ಕಳೆದ ಎರಡು ದಿನಗಳಿಂದ ಎಸ್ಐಟಿ ತಂಡ ದೂರುದಾರನನ್ನು ಸುಮಾರು 14 ಗಂಟೆಗಳ ಕಾಲ ವಿಚಾರಣೆ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಪಡೆದುಕೊಂಡಿದೆ.
ಇಂದಿನಿಂದ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಯಿಂದ ಕಾರ್ಯಾಚರಣೆ ನಡೆಸಲಿದ್ದು, ದೂರುದಾರನ ಹೇಳಿಕೆ ಆಧಾರದ ಮೇಲೆ ಡಿಜಿಪಿ ಪ್ರಣವ್ ಮೊಹಂತಿ ತಂಡ ತನಿಖೆ ಚುರುಕುಗೊಳಿಸಿದ್ದಾರೆ.
ಸ್ಥಳ ಮಹಜರು ಬಳಿಕ ದೂರುದಾರನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದ್ದು, ನಂತರ ಆತ ಹೂತ್ತಿದ್ದೇನೆ ಎನ್ನಲಾಗುತ್ತಿರುವ ಪ್ರದೇಶಗಳ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.




