ಬೆಳಗಾವಿ: ಅಧಿಕಾರ ಹಸ್ತಾಂತರ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಬಣದಲ್ಲಿ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ರಾತ್ರಿ ಸಮಾನ ಮನಸ್ಕ ಹಾಗೂ ವಾಲ್ಮೀಕಿ ಸಮುದಾಯದ ಶಾಸಕರ ಜೊತೆ ಭೋಜನಕೂಟ ನಡೆಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ ಎನ್ ರಾಜಣ್ಣ, ಈ ಭೋಜನಕೂಟ ಕೇವಲ ಸಮುದಾಯದ ಚಟುವಟಿಕೆಗಳ ಬಗ್ಗೆ ಮಾತನಾಡಲು ಆಯೋಜಿಸಿದ್ದ ಸಭೆ ಅಲ್ಲ; ಹಲವಾರು ರಾಜಕೀಯ ವಿಚಾರಗಳನ್ನು ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದ್ಯದಲ್ಲಿಯೇ ಅವುಗಳ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರೇ ವಿವರಣೆ ನೀಡಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಅಧಿಕಾರಾವಧಿ ಕುರಿತಂತೆ ಕಳೆದ 2023ರ ಮೇ 18ರಂದು ಎಐಸಿಸಿ ಬಿಡುಗಡೆ ಮಾಡಿರುವ ಪತ್ರವೊಂದನ್ನು ಪ್ರದರ್ಶಿಸಿದ ಅವರು, ಹೈಕಮಾಂಡ್ ಈ ಪತ್ರದಲ್ಲಿ ಹೇಳಿರುವಂತೆ ನಡೆದುಕೊಳ್ಳಬೇಕು ಎಂದರು.
ಅಂದು ಎಐಸಿಸಿ ಬಿಡುಗಡೆ ಮಾಡಿರುವ ಪತ್ರದಲ್ಲಿ ಮುಂದಿನ ಲೋಕಸಭೆ ಚುನಾವಣೆ ಮುಗಿಯುವವರೆಗೆ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿತ್ತು.ಇದೀಗ ಅದು ಮುಕ್ತಾಯಗೊಂಡಿದ್ದು ಹೈಕಮಾಂಡ್ ಪತ್ರದಲ್ಲಿ ತಿಳಿಸಿರುವಂತೆ ನಿರ್ಧಾರ ಕೈಗೊಳ್ಳಬೇಕು ಎಂದರು.




