ಬೆಳಗಾವಿ: ಅಧಿಕಾರ ಹಸ್ತಾಂತರ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಬಣದಲ್ಲಿ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ರಾತ್ರಿ ಸಮಾನ ಮನಸ್ಕ ಹಾಗೂ ವಾಲ್ಮೀಕಿ ಸಮುದಾಯದ ಶಾಸಕರ ಜೊತೆ ಭೋಜನಕೂಟ ನಡೆಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ ಎನ್ ರಾಜಣ್ಣ, ಈ ಭೋಜನಕೂಟ ಕೇವಲ ಸಮುದಾಯದ ಚಟುವಟಿಕೆಗಳ ಬಗ್ಗೆ ಮಾತನಾಡಲು ಆಯೋಜಿಸಿದ್ದ ಸಭೆ ಅಲ್ಲ; ಹಲವಾರು ರಾಜಕೀಯ ವಿಚಾರಗಳನ್ನು ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದ್ಯದಲ್ಲಿಯೇ ಅವುಗಳ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರೇ ವಿವರಣೆ ನೀಡಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಅಧಿಕಾರಾವಧಿ ಕುರಿತಂತೆ ಕಳೆದ 2023ರ ಮೇ 18ರಂದು ಎಐಸಿಸಿ ಬಿಡುಗಡೆ ಮಾಡಿರುವ ಪತ್ರವೊಂದನ್ನು ಪ್ರದರ್ಶಿಸಿದ ಅವರು, ಹೈಕಮಾಂಡ್ ಈ ಪತ್ರದಲ್ಲಿ ಹೇಳಿರುವಂತೆ ನಡೆದುಕೊಳ್ಳಬೇಕು ಎಂದರು.
ಅಂದು ಎಐಸಿಸಿ ಬಿಡುಗಡೆ ಮಾಡಿರುವ ಪತ್ರದಲ್ಲಿ ಮುಂದಿನ ಲೋಕಸಭೆ ಚುನಾವಣೆ ಮುಗಿಯುವವರೆಗೆ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿತ್ತು.ಇದೀಗ ಅದು ಮುಕ್ತಾಯಗೊಂಡಿದ್ದು ಹೈಕಮಾಂಡ್ ಪತ್ರದಲ್ಲಿ ತಿಳಿಸಿರುವಂತೆ ನಿರ್ಧಾರ ಕೈಗೊಳ್ಳಬೇಕು ಎಂದರು.




