ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಜನವರಿ 10ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು.




