ಬೆಳಗಾವಿ: ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಅಧಿವೇಶನ ಮುಗಿದ ಬಳಿಕ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಶೂನ್ಯವೇಳೆಯಲ್ಲಿ ಮೇಲ್ಮನೆ ಸದಸ್ಯ ಸಿ.ಟಿ. ರವಿ ಅವರ ಸಾರಿಗೆ ನೌಕರರ ವೇತನ ಹೆಚ್ಚಳ ಕುರಿತ ಪ್ರಸ್ತಾಪದ ಬಗ್ಗೆ ಮಾತನಾಡಿದ ಸಚಿವರು, ನಾಲ್ಕು ಸಾರಿಗೆ ನಿಗಮಗಳಲ್ಲಿ ಸುಮಾರು ಒಂದು ಲಕ್ಷ ನೌಕರರಿದ್ಧಾರೆ. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುವ ಸಂಪ್ರದಾಯವಿದೆ ಎಂದರು.
2020ರಲ್ಲಿ ಮಾಡಬೇಕಿದ್ದ ಪರಿಷ್ಕರಣೆ ಕೊರೊನಾ ಹಿನ್ನೆಲೆಯಲ್ಲಿ ತಡವಾಯಿತು. 2023ರಲ್ಲಿ ಸರ್ಕಾರ ಇದರ ಪರಿಷ್ಕರಣೆ ಮಾಡಬೇಕಿತ್ತು. ಆದರೆ, ಬಜೆಟ್ನಲ್ಲಿ ಹಣ ಇಟ್ಟಿರಲಿಲ್ಲದಿದ್ದರಿಂದ ಸಾಧ್ಯವಾಗಿಲ್ಲ. ಇದೀಗ ವೇತನ ಪರಿಷ್ಕರಣೆಯನ್ನ 2027ರಲ್ಲಿ ಮಾಡಬೇಕಿದೆ. ಆದರೆ ನೌಕರರು ಹಿಂಬಾಕಿ ವೇತನ ನೀಡಬೇಕೆಂದು ಪಟ್ಟು ಹಿಡಿದಿದ್ಧಾರೆ. ನೌಕರರ ಸಂಘಟನೆಗಳೊಂದಿಗೆ ಹಲವು ಬಾರಿ ಸಭೆ ನಡೆಸಿದರೂ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದರು.
ನಿಗಮಗಳನ್ನು ಲಾಭದಾಯಕಗೊಳಿಸುವುದು, ವೇತನ ಜೊತೆಗೆ ವೇತನ ಪರಿಷ್ಕರಣೆ ಸಂಬಂಧಿಸಿದಂತೆ ನಿವೃತ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಅವರ ಏಕಸದಸ್ಯ ಸಮಿತಿ ರಚಿಸಲಾಗಿತ್ತು. ಅಧ್ಯಯನ ನಡೆಸಿದ ಸಮಿತಿಯು 14 ತಿಂಗಳ ಹಿಂಬಾಕಿ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದರು ಎಂದರು.
ಅಲ್ಲದೆ 2027ರಲ್ಲಿ ಆಗಬೇಕಿದ್ದ ವೇತನ ಪರಿಷ್ಕರಣೆಯನ್ನ 2026ರಲ್ಲಿ ಮಾಡಲು ಹಸಿರು ನಿಶಾನೆ ತೋರಿದ್ದರು. ಆದರೆ ನೌಕರರ ಸಂಘಗಳು ಇದಕ್ಕೆ ಒಪ್ಪಿರಲಿಲ್ಲ. ಸಂಘದೊಂದಿಗೆ ಡಿ.13ರಂದು ಸಭೆ ನಡೆಸಿದ್ದೇವೆ. ಅಧಿವೇಶನ ಮುಗಿದ ಬಳಿಕ ಸಿಎಂ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
4 ಸಾವಿರ ಕೋಟಿ ಸಾಲ: ಶಕ್ತಿ ಯೋಜನೆ ಜಾರಿಯಿಂದಾಗಿ ಸಾರಿಗೆ ವ್ಯವಸ್ಥೆ ಆಗಿರುವ ಪರಿಣಾಮ ಸಂಬಂಧ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ರಾಮಲಿಂಗಾರೆಡ್ಡಿ, ನಾವು ಅಧಿಕಾರಕ್ಕೆ ಬರುವುದಕ್ಕೆ ಮುಂಚೆ ಸಾರಿಗೆ ಇಲಾಖೆಯಲ್ಲಿ 4 ಸಾವಿರ ಕೋಟಿ ಸಾಲ ಇತ್ತು. 2 ಸಾವಿರ ರೂ. ಕೋಟಿ ರೂ ಸರ್ಕಾರ ಸಾಲವಾಗಿ ಕೊಟ್ಟಿದೆ. ಬಾಕಿ ಸಾಲವನ್ನು ಸರ್ಕಾರವೇ ತೀರಿಸಲಿದೆ. ವೇತನ ಬಾಕಿಯನ್ನು ಉಳಿಸಿ ಹೋಗಿದ್ದರು. ಸದ್ಯ ಬಸ್ ಗಳು 1.84 ಲಕ್ಷ ಟ್ರಿಪ್ ಗಳು ಓಡುತ್ತಿವೆ. ತೆರವಾಗಿದ್ದ 9 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ ಎಂದರು.
625 ಕೋಟಿ ಸಂಚಾರ: ಶಕ್ತಿ ಯೋಜನೆಯಲ್ಲಿ 625 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಇದರಿಂದ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಶಕ್ತಿ ಯೋಜನೆಯ ಬಾಕಿ ಹಣವನ್ನ ಮುಂದಿನ ಬಜೆಟ್ ನಲ್ಲಿ ಮೀಸಲು ಇಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.
ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರವು ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಇಲ್ಲಿಯವರೆಗೆ ರೂ.11748 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಶಕ್ತಿ ಯೋಜನೆಯ ಸಂಬಂಧ ರಾಜ್ಯ ಸರ್ಕಾರ ಇನ್ನೂ 4 ಸಾವಿರ ಕೋಟಿ ಹಣ ಬಿಡುಗಡೆ ಮಾಡಬೇಕಾಗಿದ್ದು, ಬರುವ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಹಣ ಒದಗಿಸಲಿದ್ದಾರೆ ಎಂದರು.




