ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಿ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ ಎಂದು ಹೇಳಿದರು.
ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು.
ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಇದರಲ್ಲಿ ಆರು ಮಸೂದೆಗಳನ್ನು ವಾಪಸ್ಸು ಕಳಿಸಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಸಚಿವಸಂಪುಟದಲ್ಲಿ ಚರ್ಚಿಸಲಾಗುವುದು. ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದರಿಂದ, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.




