ಮಂಗಳೂರು: ಸಮಾಜದ ಆರ್ಥಿಕ ಚಕ್ರ ತಿರುಗುವಲ್ಲಿ ಪ್ರಧಾನ ಪಾತ್ರ ವಹಿಸುವ ಕಾರ್ಮಿಕ ವರ್ಗದ ವಿರುದ್ಧ ನೀತಿಗಳನ್ನು ಜಾರಿಗೊಳಿಸಿ ಬಂಡವಾಳ ಶಾಹಿಗಳ ಜೇಬು ತುಂಬಿಸುವ ನರೇಂದ್ರ ಮೋದಿ ಸರಕಾರದ ಅಚ್ಚೇದಿನ್ ಬಂದಿರುವುದು ಈ ದೇಶದ ಅದಾನಿ ಅಂಬಾನಿಗಳಿಗೆ ಹೊರತು ಜನಸಾಮಾನ್ಯರಿಗಲ್ಲ ಎಂದು ಕಳೆದ 10 ವರ್ಷಗಳಲ್ಲಿ ಸಾಬೀತಾಗಿದೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ.ಬಾಲಕೃಷ್ಣ ಶೆಟ್ಟಿ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
CPIM ನೇತೃತ್ವದಲ್ಲಿ ಬಿಸಿರೋಡ್ ನಲ್ಲಿ ಜರುಗಿದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮಟ್ಟದ ರಾಜಕೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಜನವಿರೋಧಿ ರೈತ ಕಾರ್ಮಿಕ ವಿರೋಧಿ ನರೇಂದ್ರ ಮೋದಿ ಸರಕಾರ ಮತ್ತೆ ಅಧಿಕಾರದ ಗದ್ದುಗೇರಿದರೆ ದೇಶ ಸರ್ವನಾಶವಾಗುತ್ತದೆ. ಬಿಜೆಪಿ ಕೂಟವನ್ನು ಸೋಲಿಸುವ ಮೂಲಕ ಜನತೆ ಗೆಲ್ಲುವಂತಾಗಬೇಕಾದರೆ ಇಂಡಿಯಾ ಕೂಟದ ಅಭ್ಯರ್ಥಿಯನ್ನು ಗೆಲ್ಲಿಸಲು ದ.ಕ.ಜಿಲ್ಲೆಯ ಕಾರ್ಮಿಕ ವರ್ಗ ಒಂದಾಗಿ ನಿಲ್ಲುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದರು.
ದ.ಕ.ಜಿಲ್ಲೆಯಲ್ಲಿ ಆರ್ಥಿಕತೆಯ ಜೀವನಾಡಿಯಾದ ಬೀಡಿ ಉದ್ಯಮ ಇಂದು ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಲಕ್ಷಾಂತರ ತಾಯಂದಿರ ಬದುಕು ಸಂಕಷ್ಟದಲ್ಲಿದೆ. ಇದಕ್ಕೆ ನರೇಂದ್ರ ಮೋದಿ ಸರಕಾರದ ಧೋರಣೆ ಹಾಗೂ ಕಳೆದ 33 ವರ್ಷಗಳಿಂದ ಗೆದ್ದು ಬಂದಿರುವ ಈ ಜಿಲ್ಲೆಯ ಬಿಜೆಪಿ ಸಂಸದರ ದಿವ್ಯ ಮೌನವೇ ಕಾರಣ ಎಂದು ದೂರಿದರು.
CPIM ಬಂಟ್ವಾಳ ತಾಲೂಕು ಮುಖಂಡ ಬಿ.ಉದಯ ಕುಮಾರ್ ಮಾತನಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದರೂ ಕಳೆದ 33 ವರ್ಷಗಳಲ್ಲಿ ಬಿಜೆಪಿ ಯಾವುದೇ ರೀತಿಯ ಕಾರ್ಯ ನಿರ್ವಹಿಸದೆ ಘೋರ ಅನ್ಯಾಯವೆಸಗಿದೆ. ಕೇವಲ ದ್ವೇಷ ರಾಜಕಾರಣವನ್ನೇ ಬಂಡವಾಳವನ್ನಾಗಿಸಿದ ಬಿಜೆಪಿ ಮತ್ತೊಮ್ಮೆ ಗೆದ್ದರೆ ತುಳುನಾಡಿನ ಸೌಹಾರ್ದತೆ ಹಾಗೂ ಅಭಿವೃದ್ದಿಗೆ ಕೊಡಲಿ ಪೆಟ್ಟು ಬೀಳುವುದು ಖಂಡಿತ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ CPIM ಹಿರಿಯ ನಾಯಕ ಚಂದ್ರ ಪೂಜಾರಿ ಬೋಳಂತೂರುರವರು ಮಾತನಾಡಿ, ಧರ್ಮ ರಾಜಕಾರಣವನ್ನೇ ಉಸಿರನ್ನಾಗಿಸಿದ ಬಿಜೆಪಿಗೆ ಈ ಬಾರಿ ಜಿಲ್ಲೆಯ ಜನತೆ ಅಭಿವೃದ್ಧಿಯ ವಿಚಾರದಲ್ಲಿ ಎತ್ತಿರುವ ಪ್ರಶ್ನೆಗೆ ಕಂಗಾಲಾಗಿದ್ದು, ಸೋಲಿನ ಭೀತಿಯಲ್ಲಿ ನರಳಾಡುತ್ತಿದೆ. ಅಂತೂ ಜಿಲ್ಲೆಯಲ್ಲಿ ಬಿಜೆಪಿ ಸೋಲದಿದ್ದರೆ ಜನತೆಗೆ ಉಳಿಗಾಲವಿಲ್ಲ ಎಂದರು.
ವೇದಿಕೆಯಲ್ಲಿ CPIM ಬಂಟ್ವಾಳ ತಾಲೂಕು ಮುಖಂಡರಾದ ನಾರಾಯಣ ಬಡಕಬೈಲ್, ಲೋಲಾಕ್ಷಿ ಬಂಟ್ವಾಳ, ನಾರಾಯಣ ಪೈಲೋಡಿ ಮುಂತಾದವರು ಹಾಜರಿದ್ದರು.




