ಕಾರವಾರ: ವಿಧಾನ ಪರಿಷತ್ ಶಾಸಕರ 2023-24 ನೇ ಸಾಲಿನ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಅವರು ನಗರಸಭೆ ಆವರಣದಲ್ಲಿ ಒಟ್ಟು 9 ವಿಕಲಚೇತನರಿಗೆ 10 ಲಕ್ಷ ರೂ ಅನುದಾನದಲ್ಲಿ ಯಂತ್ರಚಾಲಿತ ತ್ರಿಚಕ್ರ ವಾಹನವನ್ನು ವಿತರಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಂತರ ಮಾತನಾಡಿದ ಅವರು, ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗಕ್ಕಾಗಿ ಮತ್ತು ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಆ ಕಾರಣಕ್ಕೆ ಅವರ ಬದುಕಿಗೆ ಚೈತನ್ಯ ನೀಡಲು ಮತ್ತು ಉಳಿದವರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಲು ಸರ್ಕಾರ ನೆರವು ನೀಡುತ್ತಿದೆ ಇವುಗಳ ಸದುಪಯೋಗ ಪಡೆಯಬೇಕು ಎಂದರು.
ಕಳೆದ ವರ್ಷ ಕೂಡಾ 10 ಜನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಲಾಗಿದ್ದು, ಮುಂದಿನ ವರ್ಷ ವಿಕಲಚೇತನ ಮಕ್ಕಳಿಗೆ ವಿದ್ಯಾಭ್ಯಾಸ ಸಲುವಾಗಿ ಲ್ಯಾಪ್ಟಾಪ್ ಕಂಪ್ಯೂಟರ್ ವಿತರಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ರವಿರಾಜ ಅಂಕೋಲೆಕರ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ವಿಕಲಚೇತನ ಕಲ್ಯಾಣಾಧಿಕಾರಿ ರಾಘವೇಂದ್ರ ಭಟ್ಟ, ನಗರಸಭೆ ಎಎಇ ಸದಾನಂದ ಮತ್ತಿತರರು ಉಪಸ್ಥಿತರಿದ್ದರು.




