ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿರುವ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜೊತೆ ಮೈಸೂರಿನಲ್ಲಿ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಗಮನ ಸೆಳೆದಿದ್ದಾರೆ. ಈ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿರುವ ಅವರು ಜನವರಿ 16ರಂದು ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ರಾಜ್ಯ ಕಾಂಗ್ರೆಸ್ಸಿನ ವಿದ್ಯಮಾನಗಳು ಮನರೇಗಾ ಪರವಾಗಿ ಜನಾಂದೋಲನ ಮೂಡಿಸಲು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಅವರ ಗಮನ ಸೆಳೆದಿದ್ದೇನೆ. ಯಾವ ವಿಷಯಗಳ ಕುರಿತು ನಮ್ಮಿಬ್ಬರ ನಡುವೆ ಮಾತುಕತೆ ನಡೆದಿದೆ ಎಂಬ ವಿಷಯವನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.
ರಾಹುಲ್ ಗಾಂಧಿ ಅವರ ಜೊತೆಗೆ ಮಾತನಾಡುವ ಸಮಯದಲ್ಲಿ ನಾನು ಯಾವ ಸಂದೇಶವನ್ನು ರವಾನಿಸಿಲ್ಲ ಮಾಧ್ಯಮಗಳು ಈ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ನಡುವೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಾಕಿರುವ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಅವರು ಇದು ಒಕ್ಕಲಿಗ ಉದ್ಯಮಿಗಳ ಸಮಾವೇಶದಲ್ಲಿ ಮಾತನಾಡುವಾಗ ಹೇಳಿದ ವಾಕ್ಯವಾಗಿದೆ ನನ್ನ ಅನುಭವವನ್ನು ಸಮುದಾಯದ ಉದ್ಯಮಿಗಳಿಗೆ ವಿವರಿಸುವಾಗ ತಿಳಿಸಿದ ಶಬ್ದ ಇದರ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದರು.




