ಬೆಂಗಳೂರು: ಲೋಕದ ಡೋಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ಇದು ಹಾಸನದ ಪೆನ್ ಡ್ರೈವ್ ಪ್ರಕರಣ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ತಿರುಗೇಟು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಬಸವ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಕುಮಾರಸ್ವಾಮಿ ಅವರ ಆರೋಪ ಕುರಿತಂತೆ ಮೊದಲು ನಿಮ್ಮ ಮನೆಯನ್ನು ಸರಿ ಪಡಿಸಿಕೊಳ್ಳಿ ಎಂದರು.
ಇಂದು ಬಸವಣ್ಣನವರ ಕೆಲಸ. ಇಲ್ಲಿ ಬೇರೆ ವಿಚಾರಗಳ ಚರ್ಚೆ ಸೂಕ್ತವಲ್ಲ. ಬಸವಣ್ಣ ಏನು ಹೇಳಿದ್ದಾರೆ. ಲೋಕದ ಡೋಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ಎಂದಿದ್ದಾರೆ. ಬೇರೆಯವರ ಮೇಲೆ ಏಕೆ ಜವಾಬ್ದಾರಿ ಹೊರಿಸುತ್ತೀರಿ. ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ. ಮೊದಲು ನಿಮ್ಮ ಮನೆ ರಿಪೇರಿ ಮಾಡಿಕೊಳ್ಳಿ ಎಂದರು.
ಬೇರೆಯವರ ಬಗ್ಗೆ ಏಕೆ ಮಾತನಾಡುತ್ತಿರಿ? ಲೋಕದ ಡೋಂಕನ್ನು ತಿದ್ದಿಕೊಳ್ಳಿ ಎಂದು ಬಸವಣ್ಣ ಹೇಳಿದ್ದಾರೆ. ನಾವು ಅದನ್ನು ಪಾಲಿಸೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ. ರಾಜ್ಯಪಾಲರಿಗೆ ದೂರು ನೀಡಿರುವ ಕುಮಾರಸ್ವಾಮಿಯವರಿಗೆ ಶುಭವಾಗಲಿ ಎಂದು ಹಾರೈಸುವುದಾಗಿ ಹೇಳಿದರು.



