ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಎಲ್ಲಾ ವಾರ್ಡ್ಗ ಳಿಂದ ಆಟೋ ಟಿಪ್ಪರ್ ಗಳ ಹಸಿ & ಒಣ ಕಸಗಳಾಗಿ ವಿಂಗಡಿಸಿದ ರೂಪದಲ್ಲಿ ಸಂಗ್ರಹಿಸಲಾಗುತ್ತಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಪ್ರತಿನಿತ್ಯ ಸಂಗ್ರಹಿಸಲಾಗುವ ಸುಮಾರು 100 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಿಸಿ ಸಿಟಿ ಕಾಂಪೋಸ್ಟ್ ತಯಾರಿಸಲಾಗುತ್ತಿದೆ ಹಾಗೂ 50 ಟನ್ ಒಣ ತ್ಯಾಜ್ಯವನ್ನು ಶ್ರೇಡಿಂಗ್ & ಬೇಲಿಂಗ್ ಮಾಡಿ ಪರ್ಯಾಯ ಇಂಧನವಾಗಿ ಉಪಯೋಗಿಸಲು ಸಿಮೆಂಟ್ ಕಾರ್ಖಾನೆಗಳಿಗೆ ಕಳುಹಿಸಲಾಗುತ್ತಿದೆ. ಹಾಗೂ ಪ್ರತ್ಯೇಕವಾಗಿ ಸಂಗ್ರಹಿಸುವ 1 ರಿಂದ 2 ಟನ್ಗ್ಳನ್ನು ಸ್ಯಾನಿಟರಿ ನ್ಯಾಪ್ಕಿನ್/ಡ್ರೈಪರ್ಗಕಳಂತಹ ಅಪಾಯಕಾರಿ ತ್ಯಾಜ್ಯವನ್ನು ಇನ್ಸಿ್ನರೇಟ್ಗಗಳಲ್ಲಿ ಸುಡುವ ಮೂಲಕ ವೈಜ್ಞಾನಿಕವಾಗಿ ವಿಲೇಪಡಿಸಲಾಗುತ್ತಿದೆ. ಹೀಗೆ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಸಂಪೂರ್ಣ ತ್ಯಾಜ್ಯವನ್ನು ವಿಲೆಪಡಿಸುತ್ತಿದ್ದು ಸಾರ್ವಜನಿಕರು ತ್ಯಾಜ್ಯವನ್ನು ಹೊರಗೆ ಎಸೆಯದೇ ತಮ್ಮ ಮನೆಗಳಲ್ಲಿ ಕಡ್ಡಾಯವಾಗಿ ವಿಂಗಡಿಸಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ ಸಹಕರಿಸುತ್ತಿರುವುದರಿಂದ ಇದು ಸಾಧ್ಯವಾಗಿದೆ.
ಕೆಲವು ಪ್ರದೇಶಗಳಲ್ಲಿ ದೂರದಿಂದ ವಾಹನಗಳಲ್ಲಿ ಬರುವ ಅನಾಗರಿಕರು ತ್ಯಾಜ್ಯವನ್ನು ಎಸೆಯುತ್ತಿರುವ ಪ್ರಕರಣಗಳು ಕಂಡುಬಂದಿದ್ದು, ನಾಗರೀಕ ಪ್ರಜ್ಞೆ ಹಾಗೂ ಪರಿಸರ ಪ್ರಜ್ಞೆಯನ್ನು ರೂಢಿಸಿ ಕೊಳ್ಳುವಂತೆ ಮನವಿ ಮಾಡುತ್ತಾ ಅ.20 ರಿಂದ 22 ರವರೆಗೆ ಆಚರಿಸಲಾಗುವ ನರಕ ಚತುರ್ದಶಿ, ದೀಪಾವಳಿ ಹಾಗೂ ಬಲಿಪಾಡ್ಯಮಿ ದಿನಗಳಂದು ಪೂಜಾ ಕಾರ್ಯಗಳಲ್ಲಿ ಉಪಯೋಗಿಸುವ ಬಾಳೆಕಂಬ, ತೋರಣ, ಹೂ ಗಳಂತಹ ಪವಿತ್ರ ತ್ಯಾಜ್ಯವನ್ನು ಹಬ್ಬದ ನಂತರ ಸಾರ್ವಜನಿಕರು, ಬೀಡಾಡಿ ನಾಯಿ ಹಂದಿಗಳು ತುಳಿದಾಡುವಂತೆ ಹೊರಗೆ ಎಸೆಯದೇ ಪ್ರತ್ಯೇಕವಾಗಿ ಸಂಗ್ರಹಿಸಿಟ್ಟ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡುವಂತೆ ಹಾಗೂ ಸಾಧ್ಯವಾದಷ್ಟು ಮಟ್ಟಿಗೆ ನಮ್ಮ ಮಕ್ಕಳ, ಹಿರಿಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪಟಾಕಿಗಳನ್ನು ಸಿಡಿಸದೇ ದೀಪಗಳನ್ನು ಹಚ್ಚುವ ಮೂಲಕ ಸ್ವಚ್ಛ-ಶುಭ ದೀಪಾವಳಿಯನ್ನಾಗಿ ಆಚರಿಸಬೇಕು ಎಂದು ಪಾಲಿಕೆ ಆಯುಕ್ತೆ ರೇಣುಕಾ ಕರೆನೀಡಿದ್ದಾರೆ.




