ಜಿ.ಎಂ.ಸಿದ್ದೇಶ್ವರ್ ಮತದಾನ ಗೌಪ್ಯತೆ ನಿಯಮ ಉಲ್ಲಂಘಿಸಿದ್ದಾರೆ: ಕೆಪಿಸಿಸಿ
ಬೆಂಗಳೂರು: ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ತಮ್ಮ ಪತ್ನಿ ಗೃಹಲಕ್ಷ್ಮೀ, ಗೃಹಜ್ಯೋತಿ ಮುಂತಾದ ಗ್ಯಾರಂಟಿ ಯೋಜನೆಗಳಿಂದ ಪ್ರಭಾವಿತಗೊಂಡು ಕಾಂಗ್ರೆಸ್ ಗೆ ಮತ ಹಾಕಬಹುದು ಎಂಬ ಅನುಮಾನವಿತ್ತೇ!? ಎಂದು ಕೆಪಿಸಿಸಿ ಪ್ರಶ್ನಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ದಾವಣಗೆರೆ ಕ್ಷೇತ್ರದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಆಗಮಿಸಿದ್ದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಪತ್ನಿ ಮತದಾನ ಮಾಡುವ ವೇಳೆ ಇವಿಎಂ ಬಳಿ ಇರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, ಮತದಾನದಲ್ಲಿ ಯಾವುದೇ ವ್ಯಕ್ತಿ ಗೌಪ್ಯತೆ ಕಾಪಾಡಿಕೊಳ್ಳುವುದು ಅವರ ಹಕ್ಕು ಹಾಗೂ ಮತದಾನದ ಗೌಪ್ಯತೆಗೆ ಯಾರೂ ಕೂಡ ಧಕ್ಕೆ ತರಬಾರದು ಎಂದಿದೆ.
ಆದರೆ ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪತಿ ಹಾಗೂ ಸಂಸದ ಜಿ.ಎಂ ಸಿದ್ದೇಶ್ವರ್ ಅವರು ಮತದಾನದ ಗೌಪ್ಯತೆಯ ನಿಯಮ ಉಲ್ಲಂಘಿಸಿ ಗಾಯತ್ರಿ ಸಿದ್ದೇಶ್ವರ್ ಅವರು ಮತದಾನ ಮಾಡುವ ವೇಳೆ ಇವಿಎಂ ಬಳಿ ಇದ್ದಾರೆ ಎಂದಿದೆ.
Chief Electoral Officer Karnataka ಅವರು ಕೂಡಲೇ ಈ ಬಗ್ಗೆ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.




