ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
6 ರಿಂದ 18 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುತ್ತಿರುವುದು ಮೂಲಭೂತ ಹಕ್ಕು ಆಗಿರುತ್ತದೆ. ಹಾಗೂ ಮಕ್ಕಳ ಉಚಿತ ಶಿಕ್ಷಣ ಹಕ್ಕು ಮಕ್ಕಳ ದಾಖಲಾತಿ ಹಾಗೂ ಹಾಜರಾತಿಗೆ ಸಂಬಂಧಿಸಿದಂತೆ ಈ ಸಂಬಂಧ ಪಾಲಿಕೆಯ 45 ವಾರ್ಡ್ಗಳ ವ್ಯಾಪ್ತಿಯಲ್ಲಿ ಜುಲೈ 22ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಮನೆ ಮನೆಗೆ ತೆರಳಿ ಸರ್ವೆ ಕಾರ್ಯವನ್ನು ಮೊಬೈಲ್ ಆಪ್ ಮೂಲಕ ಸ್ವ-ಸಹಾಯ ಸಂಘದ ಸದಸ್ಯರುಗಳು ಕೈಗೊಳ್ಳುತ್ತಾರೆ.
ಮೊಬೈಲ್ ಆಪ್ ಗೆ ಸಂಬಂಧಿಸಿದಂತೆ ಕೇಳುವ ಪೂರ್ಣ ಮಾಹಿತಿಯನ್ನು ಕೊಡುವುದರೊಂದಿಗೆ ಸರ್ವೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.




