ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕಳೆದ 16 ತಿಂಗಳಲ್ಲಿ ಜನರ ತಲೆಗೆ ಚಪ್ಪಡಿ ಎಳೆಯುವ ಕೆಲಸ ಮಾಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಂಜಯಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಹಣ ಕೊರತೆಯಿಂದಾಗಿ ಔಷಧಿ ಖರೀದಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನ ಕಡಿತ ಮಾಡಿದೆ ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ. ಇದಕ್ಕಾಗಿ ಸೇವಾ ಶುಲ್ಕವನ್ನು ಏರಿಸಲಾಗಿದೆ. ಅನ್ನ ಮತ್ತು ಆರೋಗ್ಯದ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ದೂರಿದರು.
ಒಂದು ಕಡೆ ಜಮೀನು ಹೋಗುತ್ತಿದೆ, ಮತ್ತೊಂದು ಕಡೆ ರೇಷನ್ ಕಾರ್ಡ್ ಹೋಗುತ್ತಿದೆ, ಈಗ ಉಚಿತ ಆರೋಗ್ಯವೂ ದೊರೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಶುಲ್ಕಗಳನ್ನು ಹೆಚ್ಚು ಮಾಡಿರುವುದೇ ಖಜಾನೆ ಖಾಲಿಯಾಗಿರುವುದಕ್ಕೆ ಸಾಕ್ಷಿ. ಐದು ಗ್ಯಾರಂಟಿಗಳಿಗಾಗಿ ಜನರ ಮೇಲೆ ತೆರಿಗೆ ಹೊರೆ ಹಾಕಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ ಪ್ರಕಾರ ಇದು ಬಡವರ ಪರವಾದ ಸರ್ಕಾರವೇ? ಎಂದು ಪ್ರಶ್ನಿಸಿದರು.
ಮುಡಾ ಹಗರಣದ ನಂತರ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಜನರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಲಂಚ ಇದ್ದರೆ ಮಾತ್ರ ವಿಧಾನಸೌಧಕ್ಕೆ ಪ್ರವೇಶ ಎಂಬ ಸ್ಥಿತಿ ಇದೆ. ಆರೋಗ್ಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ನೀಡಬೇಕು. ಇದರ ಮೇಲೂ ಸರ್ಕಾರ ವಕ್ರದೃಷ್ಟಿ ಬೀರಿದೆ ಎಂದರು.




