ಬಳ್ಳಾರಿ: ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಕೃಷಿ ಚಟುವಟಿಕೆ ಜೊತೆಗೆ ಕೃಷಿ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡುವುದರಿಂದ ತಮ್ಮ ಕುಟುಂಬ ಆರ್ಥಿಕ ಅಭಿವೃದ್ಧಿಯಾಗುವುದು ಎಂದು ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಆವರಣದಲ್ಲಿ ಏರ್ಪಡಿಸಿದ್ದ ಸ್ವ ಸಹಾಯ ಸಂಘದ ಮಹಿಳೆಯರಿಗೆ 10 ದಿನಗಳ ಉಚಿತ ಮೀನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Read more: ಮೀನು ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿಮಿನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಮಾತನಾಡಿ, ಮೀನು ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಪ್ರತಿಯೊಂದು ದೇಹದಲ್ಲಿರುವ ಕೊಲೆಸ್ಟರಾಲ್ ಅನ್ನು ಸಮತೋಲನದಲ್ಲಿ ಇಡುತ್ತದೆ. ಇದನ್ನು ಔಷಧಿ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕ ಭೀಮಪ್ಪ.ಕೆ ಲಾಳಿ, ವಿನೋದ ಕುಮಾರ.ಸಿ., ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೆಸಾಬ್.ಎಚ್ ಎರಿಮನಿ, ಜಿಲ್ಲಾ ಪಂಚಾಯತ್ನ ಎನ್ಆರ್ಎಲ್ಎಂ ಸಿಬ್ಬಂದಿಗಳಾದ ರಾಜೇಂದ್ರ, ವಿಜಯ ಕುಮಾರ, ರಘುವರ್ಮ, ಉಪನ್ಯಾಸಕರಾದ ದಿನೇಶ್, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ ಮಹಿಳಾ ಶಿಬಿರಾರ್ಥಿಗಳು ಇನ್ನಿತರರು ಹಾಜರಿದ್ದರು.



