ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಜಲ ಜೀವನ್ ಮಿಷನ್ ಕಾರ್ಯಗಳು ವಿಳಂಬವಾಗದಂತೆ ನೋಡಿಕೊಳ್ಳಲು ಶಕ್ತಿಮೀರಿ ಶ್ರಮಿಸುತ್ತಿದೆ. ಶೇಕಡ 86 ಕ್ಕೂ ಹೆಚ್ಚು ಮನೆಗಳು ಈಗಾಗಲೇ ನಳ ಸಂಪರ್ಕವನ್ನು ಪಡೆದುಕೊಂಡಿವೆ. ರಾಜ್ಯವು ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದೆ ಮತ್ತು ಸಕಾಲಿಕ ಹಂಚಿಕೆ ಹಾಗೂ ನಿರಂತರವಾಗಿ ಕಾಮಗಾರಿಗಳನ್ನು ಮುಂದುವರಿಸುವ ಮೂಲಕ ಯೋಜನೆಯನ್ನು ಬೆಂಬಲಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
– ₹69,487 ಕೋಟಿಗಳ ಅನುಮೋದಿತ ವೆಚ್ಚಕ್ಕೆ ವಿರುದ್ಧವಾಗಿ, ಕರ್ನಾಟಕವು ಈಗಾಗಲೇ ₹24,598 ಕೋಟಿಗಳನ್ನು ಖರ್ಚು ಮಾಡಿದೆ
– ಕೇಂದ್ರವು ₹11,786 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ, ₹13,000 ಕೋಟಿಗೂ ಹೆಚ್ಚಿನ ಮೊತ್ತವನ್ನು ಬಾಕಿ ಉಳಿಸಿದೆ.
– ಪ್ರಸಕ್ತ ವರ್ಷ ₹3,804 ಕೋಟಿ ಹಂಚಿಕೆಗೆ ಪ್ರತಿಯಾಗಿ ನಮಗೆ ಬಂದಿರುವುದು ₹570 ಕೋಟಿಗಳು ಮಾತ್ರ. ಕೇಂದ್ರ ಬೆಂಬಲದ ನಿರೀಕ್ಷೆಯಲ್ಲಿ ರಾಜ್ಯವು ₹1,500 ಕೋಟಿಗಳನ್ನು ಬಿಡುಗಡೆ ಮಾಡಬೇಕಾಯಿತು.
– ಸುಮಾರು ₹1,700 ಕೋಟಿ ಮೊತ್ತದ ಬಿಲ್ ಇನ್ನೂ ಗುತ್ತಿಗೆದಾರರಿಗೆ ಪಾವತಿಯಾಗಿಲ್ಲ. ಇನ್ನೂ ₹2,600 ಕೋಟಿ ವೆಚ್ಚದ ಕೆಲಸ ನಡೆಯುತ್ತಿದೆ ಮತ್ತು ಅನೇಕರು ಸಿಬ್ಬಂದಿಯನ್ನು ಕೆಲಸದಿಂದ ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದಾರೆ.
ಆದ್ದರಿಂದ ಗ್ರಾಮೀಣ ನೀರು ಸರಬರಾಜು ಕಾರ್ಯಗಳು ಸ್ಥಗಿತಗೊಳ್ಳದಂತೆ ಬದ್ಧವಾಗಿರುವ ಕೇಂದ್ರ ಪಾಲನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಾನು ಮಾನ್ಯ ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದಿದ್ದೇನೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




