ಬೆಂಗಳೂರು: ಸಂಸದರಾಗಿ ಆಯ್ಕೆಯಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಳ್ಳಾರಿ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಅವರ ರಾಜೀನಾಮೆಯಿಂದ ತೆರವಾದ ವಿಧಾನಸಭೆಯ ಮೂರು ಸ್ಥಾನಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಮನಗರ ಜಿಲ್ಲೆಯ ಚನ್ನಪಟ್ಟಣ, ವಿಜಯನಗರ ಜಿಲ್ಲೆಯ ಸಂಡೂರು ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರಂದು ನಡೆಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಅಕ್ಟೋಬರ್ 18ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಅ.25ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅ. 28ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ.




