ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನಡೆಯಲಿರುವ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಲು ಕೈಗೊಂಡಿರುವ ತೀರ್ಮಾನವನ್ನು ಬಲವಾಗಿ ಸಮರ್ಥಿಸಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಅನುಭವದ ಆಧಾರದ ಮೇಲೆ ಇಂತಹ ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ದೇಶಗಳು ಭಾರತದ ಮಾದರಿಯಲ್ಲಿಯೇ ಇವಿಎಂ ಬಳಸಿ ಇದೀಗ ಮತ್ತೆ ಬ್ಯಾಲೆಟ್ ಪೇಪರ್ ಯುಗಕ್ಕೆ ಮರಳಿವೆ. ಅಲ್ಲಿಯ ಚುನಾವಣೆಗಳು ಬ್ಯಾಲೆಟ್ ಪೇಪರ್ ನಲ್ಲಿಯೇ ನಡೆಯುತ್ತಿವೆ ಎಂದರು.
ರಾಜ್ಯ ಸರ್ಕಾರ ಈ ವಿಚಾರವಾಗಿ ಸಾಕಷ್ಟು ಅಧ್ಯಯನ ಮತ್ತು ಅನುಭವ ಓರೆಗೆ ಹಚ್ಚಿ ತೀರ್ಮಾನ ಕೈಗೊಂಡಿದೆ. ಇದರಿಂದ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗಳು ನಡೆಯಲಿವೆ ಎಂದರು.



