ಕಾರ್ಪೊರೇಟ್ ಹಿಂದುತ್ವದ ದುಷ್ಟಕೂಟವನ್ನು ಸೋಲಿಸದಿದ್ದರೆ ಭಾರತಕ್ಕೆ ಭವಿಷ್ಯವಿಲ್ಲ
ಮಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರಿಗೆ ಮಂಕುಬೂದಿ ಎರಚಿ,ಹತ್ತು ಹಲವು ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರ ನಡೆಸಿದ ನರೇಂದ್ರ ಮೋದಿ ನೇತೃತ್ವದ ಸರಕಾರ ಎಲ್ಲಾ ವಿಭಾಗದ ಜನತೆಗೆ ಮೋಸ ಮಾಡಿ ಲಕ್ಷಾಂತರ ಕೋಟಿ ರೂಪಾಯಿ ಹಣವನ್ನು ಚುನಾವಣಾ ಬಾಂಡ್ ಹೆಸರಿನಲ್ಲಿ ಲಪಟಾಯಿಸಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಂತಹ ಕಾರ್ಪೊರೇಟ್ ಹಿಂದುತ್ವದ ದುಷ್ಟಕೂಟವನ್ನು ದೇಶದ ಜನತೆ ಒಂದಾಗಿ ಸೋಲಿಸದಿದ್ದರೆ ಭಾರತಕ್ಕೆ ಭವಿಷ್ಯವಿಲ್ಲ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ರವರು ಆತಂಕ ವ್ಯಕ್ತಪಡಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಉಳ್ಳಾಲ ತಾಲೂಕು ಮಟ್ಟದ CPIM ಸ್ಥಳೀಯ ಶಾಖಾ ಕಾರ್ಯದರ್ಶಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೂರನೇ ಬಾರಿಗೆ ಮತ್ತೆ ಅಧಿಕಾರದ ಗದ್ದುಗೆಯನ್ನು ಏರುವುದಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬಿಜೆಪಿ, ಇಡಿ ಐಟಿ ದಾಳಿಗಳ ಮೂಲಕ ಯಾತಕ್ಕಾಗಿ ಪ್ರತಿಪಕ್ಷಗಳನ್ನು ಮಣಿಸಲು ಹೊರಟಿದೆ? ಮಾತ್ರವಲ್ಲದೆ ಹಿಂದುತ್ವದ ಹೆಸರಿನಲ್ಲಿ ಮತ್ತೆ ದೇಶವನ್ನು ವಿಭಜಿಸಲು ಹೊರಟ ಬಿಜೆಪಿ ಸಂಘಪರಿವಾರದ ಕುತಂತ್ರಗಳನ್ನು ಜನತೆ ಸರಿಯಾದ ದಾರಿಯಲ್ಲಿ ಅರ್ಥೈಸಬೇಕಾಗಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ CPIM ಜಿಲ್ಲೆಯ ಹಿರಿಯ ನಾಯಕ ಕೃಷ್ಣಪ್ಪ ಸಾಲಿಯಾನ್, ದೇಶದ ಪ್ರಮುಖ ಆಧಾರ ಸ್ತಂಭಗಳಾದ ಕಾರ್ಮಿಕ ವರ್ಗ ಹಾಗೂ ರೈತಾಪಿ ಜನತೆಯ ಬದುಕಿನಲ್ಲಿ ಚೆಲ್ಲಾಟವಾಡುವ ಮೋದಿ ಸರಕಾರ ದೇಶದ ಅರ್ಥಿಕತೆಯನ್ನೇ ಸರ್ವನಾಶ ಮಾಡಿದೆ. ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್ ಸಂಸ್ಥೆಗಳ ಕೈಗೊಪ್ಪಿಸಿ ಮತ್ತೆ ದೇಶವನ್ನು ಗುಲಾಮಗಿರಿಯತ್ತ ಸಾಗಿಸಲು ಹುನ್ನಾರ ನಡೆಸುತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ CPIM ಉಳ್ಳಾಲ ತಾಲ್ಲೂಕು ಕಾರ್ಯದರ್ಶಿ ಯು.ಜಯಂತ ನಾಯಕ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೂಟವನ್ನು ಸೋಲಿಸಿ, ಜಾತ್ಯಾತೀತ ಶಕ್ತಿಗಳ ಗೆಲುವಿಗೆ ಕಮ್ಯುನಿಸ್ಟರು ಶಕ್ತಿಮೀರಿ ಶ್ರಮಿಸಬೇಕು ಎಂದರು.
ಮಾರ್ಚ್ 31 ರಂದು ತೊಕ್ಕೋಟು ಯುನಿಟಿ ಹಾಲ್ ನಲ್ಲಿ ನಡೆಯಲಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಸಮಾವೇಶ,ಸ್ಥಳೀಯ ಪ್ರದೇಶಗಳಲ್ಲಿ ರಚಿಸಲ್ಪಡುವ ಸಿದ್ದತಾ ಸಭೆಗಳು ಹಾಗೂ ಎಪ್ರಿಲ್ 7ರಂದು ಜಿಲ್ಲೆಯಾದ್ಯಂತ ಯೋಜಿಸಲಾಗಿರುವ ಜನತೆಯ ಮಹಾಭಿಯಾನ ಮನೆ ಮನೆ ಭೇಟಿ ಕಾರ್ಯಕ್ರಮಗಳನ್ನು ಉಳ್ಳಾಲ ತಾಲೂಕಿನಲ್ಲಿ ಯಶಸ್ವಿಗೊಳಿಸಲು ಸಭೆಯು ಸರ್ವಾನುಮತದಿಂದ ಅಂಗೀಕರಿಸಿತು.
ಸಭೆಯಲ್ಲಿ CPIM ಜಿಲ್ಲಾ ನಾಯಕರಾದ ಪದ್ಮಾವತಿ ಶೆಟ್ಟಿ, ತಾಲೂಕು ಮುಖಂಡರಾದ ಸುಂದರ ಕುಂಪಲ, ಲೋಕಯ್ಯ ಪನೀರ್, ವಿಲಾಸಿನಿ ತೊಕ್ಕೋಟು, ರೋಹಿದಾಸ್,ಚಂದ್ರಹಾಸ ಪಿಲಾರ್,ಜಯಂತ ಅಂಬ್ಲಮೊಗರು,ಶೇಖರ್ ಕುಂದರ್ ಮುಂತಾದವರು ಉಪಸ್ಥಿತರಿದ್ದರು.




