ಬೆಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ 2025ರ ದುಷ್ಪರಿಣಾಮಗಳ ಕುರಿತು ಮಹಿಳೆಯರಿಗೆ ಅರಿವು ಮೂಡಿಸುವ ಮೂಲಕ ಅವರನ್ನು ಶಕ್ತಿಗೊಳಿಸುವ ಕೆಲಸ ಇನ್ನೂ ಹೆಚ್ಚೆಚ್ಚಾಗಿ ಆಗಬೇಕಿದೆ. ಇದು ನಮ್ಮ ಸಮುದಾಯದ ಅಭಿವೃದ್ಧಿಗೆ ಹಾಗೂ ಭವಿಷ್ಯಕ್ಕಾಗಿ ಅತ್ಯಂತ ಅಗತ್ಯವಾದುದು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಕ್ಫ್ ತಿದ್ದುಪಡಿ ಕಾಯ್ದೆ2025 ರ ಸಂವಿಧಾನ ವಿರೋಧಿ ತಿದ್ದುಪಡಿಗಳ ಕುರಿತು ಬೆಂಗಳೂರಿನ ಕಾಡುಗೋಡಿಯ ಈದ್ಗಾದಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಜ್ಞಾನ ಮತ್ತು ಜಾಗೃತಿಯ ಮೂಲಕ ನಮ್ಮ ಮಹಿಳೆಯರನ್ನು ಶಕ್ತಗೊಳಿಸುವುದು ಬಲಿಷ್ಠ ಮತ್ತು ಸಬಲೀಕೃತ ಸಮಾಜಕ್ಕೆ ಅತೀ ಅಗತ್ಯವಾಗಿದೆ. ನಾಳೆಯ ಉತ್ತಮ ಭವಿಷ್ಯಕ್ಕಾಗಿ ಇಂದು ನಾವು ಕ್ರಮ ಕೈಗೊಳ್ಳೋಣ. ನೀವು ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ, ಒಂದು ಕುಟುಂಬಕ್ಕೆ ಶಿಕ್ಷಣ ನೀಡಿದಂತೆ ಎಂದು ಹೇಳಿದರು.
ವಕೀಲರಾದ ಎಂ.ಕೆ. ಮೆತ್ರೀ ಮತ್ತು ಹಿನಾ ಐಜಾಜ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೊಸ ತಿದ್ದುಪಡಿಗಳ ಕಾನೂನು ಮತ್ತು ಸಾಮಾಜಿಕ ಪರಿಣಾಮಗಳ ಬಗ್ಗೆ ಮಹತ್ವಪೂರ್ಣ ಮಾಹಿತಿ ಹಂಚಿಕೊಂಡರು.
ಸಮುದಾಯ ಏಕತೆ ಸಾಧಿಸಬೇಕು ಮತ್ತು ಮಹಿಳೆಯರು ನ್ಯಾಯ ಮತ್ತು ಸಮಾನತೆಯ ಈ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರಬೇಕು.ಇದು ಕೇವಲ ಕಾನೂನು ವಿಚಾರವಲ್ಲ — ಇದು ನಮ್ಮ ಸಮುದಾಯದ ಭವಿಷ್ಯದ ವಿಚಾರ ಎಂದು ಅವರು ಅಭಿಪ್ರಾಯಪಟ್ಟರು.
ಈ ಕಾರ್ಯಕ್ರಮವು ನಾಗರಿಕರಿಗೆ, ವಿಶೇಷವಾಗಿ ಮಹಿಳೆಯರಿಗೆ, ವಕ್ಫ್ ತಿದ್ದುಪಡಿ ಕಾಯ್ದೆ 2025ರ ವಿರುದ್ಧ ಏಕತೆಯಿಂದ ನಿಂತು, ದೇಶದ ಸಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸಲು ಕರೆ ನೀಡಿತು.




