ಚಿತ್ರದುರ್ಗ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಇಂಗ್ಲೀಷ್ ಭಾಷೆಯ ಫಲಿತಾಂಶ ಉತ್ತಮಗೊಳಿಸುವ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ ಇಂಗ್ಲೀಷ್ ಶಿಕ್ಷಕರಿಗೆ ಜ.3 ರಂದು, ನಗರದ ತರಾಸು ರಂಗಮಂದಿರದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ರಾಜ್ಯ ಸಂಪನ್ಮೂಲ ವ್ಯಕ್ತಿ, ಬೆಳಗಾವಿ ಸರ್ಕಾರಿ ಸದಾರ್ಸ್ ಪ್ರೌಢಶಾಲೆಯ ಇಂಗ್ಲೀಷ್ ಶಿಕ್ಷಕ ಅಲ್ತಾಫ್ ಹೆಚ್ ಜಹಾಂಗೀರ್, ಇಂಗ್ಲೀಷ್ ಭಾಷೆಯ ಗದ್ಯ ಹಾಗೂ ಪದ್ಯಗಳ ಮುಖ್ಯ ವಿಷಯಗಳು, ಚಿತ್ರ ವಿವರಣೆ ಬೋಧನೆ ತಂತ್ರಗಳು, ಕಥೆ, ವೈಯಕ್ತಿಕ ವಿವರ ಹಾಗೂ ಪ್ರಬಂಧ ಬರವಣಿಗೆ, ಮಂದಗತಿ ಕಲಿಕೆಯ ವಿದ್ಯಾರ್ಥಿಗಳಿಗೆ ಬೋಧಿಸಲು ಕ್ರಿಯಾಯೋಜನೆ ಹಾಗೂ ಸುಲಲಿತ ಆಂಗ್ಲಭಾಷೆ ಬೋಧನೆಯ ಕುರಿತು ಮಾಹಿತಿ ನೀಡುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲ ಪ್ರೌಢಶಾಲೆಯ ಇಂಗ್ಲೀಷ್ ಶಿಕ್ಷಕರು ತಪ್ಪದೇ ಕಾರ್ಯಗಾರಕ್ಕೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದ್ದಾರೆ.




