ದಾವಣಗೆರೆ: ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಬರುವ ಕೃಷಿ ಹುಟ್ಟುವಳಿಗಳಾದ ಮೆಕ್ಕೆಜೋಳ, ರಾಗಿ, ಹತ್ತಿ, ತೊಗರಿ, ಅಡಿಕೆ, ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳಿಗೆ ಈಗಾಗಲೇ ಇ-ಟೆಂಡರ್ ವ್ಯವಸ್ಥೆ ಜಾರಿ ಮಾಡಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನವಂಬರ್ 25 ರಿಂದ ಭತ್ತ ಉತ್ಪನ್ನವನ್ನೂ ಸಹ ಇ-ಟೆಂಡರ್ ವ್ಯವಸ್ಥೆಯಲ್ಲಿ ಜಾರಿಗೊಳಿಸಿದ್ದು, ಇದರಿಂದ ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ಬೆಲೆಯು ಸಿಗುತ್ತಿರುವುದರಿಂದ ಜಿಲ್ಲೆಯ ರೈತರು ತಾವು ಬೆಳೆದ ಭತ್ತ ಉತ್ಪನ್ನವನ್ನು ಒಣಗಿಸಿ, ಸ್ವಚ್ಚಗೊಳಿಸಿ ದಾವಣಗೆರೆಯ ಎಪಿಎಂಸಿ ಪ್ರಾಂಗಣಕ್ಕೆ ತಂದು ಇ-ಟೆಂಡರ್ ಮೂಲಕ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆಯನ್ನು ಪಡೆದುಕೊಳ್ಳಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ತಿಳಿಸಿದ್ದಾರೆ.




