ಬೆಂಗಳೂರು: ಈ ತಿಂಗಳ 20ರೊಳಗೆ ನೂತನ ಅಧ್ಯಕ್ಷರ ಆಯ್ಕೆಯಾಗುವ ಮೂಲಕ ಎಲ್ಲ ಬಿಕ್ಕಟ್ಟುಗಳಿಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷ ವಿಜಯೇಂದ್ರ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಾನು ಯಾವುದೇ ಅಪಮಾನ ಸಹಿಸಿಕೊಳ್ಳಲು ತಯಾರಿದ್ದೇನೆ. ಪಕ್ಷಕ್ಕೆ ದುಡಿದ ಯಡಿಯೂರಪ್ಪ ಅವರನ್ನು ಅತ್ಯಂತ ಕೀಳುಮಟ್ಟದಲ್ಲಿ ನಿಂದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ತಟಸ್ಥ ಎಂದು ಹೇಳಿಕೊಳ್ಳುವವರು ಮತ್ತು ಪಕ್ಷ ಬೆಳವಣಿಗೆ ಬೇಸರ ತಂದಿದೆ ಎಂದು ಹೇಳುವವರು ಯಾಕೆ ಸುಮ್ಮನಿದ್ದಾರೆ? ಮಧ್ಯಸ್ಥಿಕೆ ಯಾಕೆ ವಹಿಸುತ್ತಿಲ್ಲ? ತಟಸ್ಥ ಬಣದ ಬಗ್ಗೆಯೂ ಗೊತ್ತು ಎಂದರು.
ಇವೆಲ್ಲ ಸರಿಪಡಿಸಲು ಪಕ್ಷದ ರಾಷ್ಟ್ರೀಯ ನಾಯಕರೇ ಬರಬೇಕಾ, ಇವರಿಗೆ ಜವಾಬ್ದಾರಿ ಇಲ್ಲವಾ? ಅಡ್ರೆಸ್ ಗೆ ಇಲ್ಲದವರೂ ಯಡಿಯೂರಪ್ಪ ಅವರಿಂದಲೇ ಮೇಲೆ ಬಂದಿದ್ದಾರೆ ಎಂದರು.
ನಾನೂ ಪಕ್ಷದಲ್ಲಿ ಕಾರ್ಯಕರ್ತನಾಗಿ, ವಿವಿಧ ಹುದ್ದೆಗಳಲ್ಲಿ ಹದಿನೆಂಟು ವರ್ಷಕ್ಕೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ್ದೇನೆ. ನಾನೇನು ಹೊಸಬನಲ್ಲ. ಲಕ್ಷಾಂತರ ಕಾರ್ಯಕರ್ತರಿಗೆ ನಾನು ಏನು ಎಂಬುದು ಗೊತ್ತು ಎಂದರು.




