ಬೆಂಗಳೂರು: ಕೆಂಪೇಗೌಡರು ಒಕ್ಕಲಿಗರಾದರೂ ಅವರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು. ವಿಶ್ವಮಾನ್ಯ ಬೆಂಗಳೂರನ್ನು ಕಟ್ಟಿದ ಅವರು ಎಲ್ಲಾ ಜಾತಿ, ಧರ್ಮಕ್ಕೂ ನಾಡಪ್ರಭುಗಳಾಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ನಾಡಪ್ರಭುಗಳ ಹೆಸರನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಕೆಂಪೇಗೌಡರ ಬಗ್ಗೆ ಚರ್ಚಾ ಸ್ಪರ್ಧೆ ನಡೆಸಲು ಹಾಗೂ ತಿಳುವಳಿಕೆ ನೀಡಲು ಪ್ರತಿ ತಾಲ್ಲೂಕಿಗೆ ಬಿಬಿಎಂಪಿಯಿಂದ ತಲಾ 1 ಲಕ್ಷ ಹಣ ಬಿಡುಗಡೆ ಮಾಡಲಾಗಿದೆ. ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಪ್ರಧಾನ ಕಾರ್ಯದರ್ಶಿಗಳು ಮುಂದಿನ ದಿನಗಳಲ್ಲಿ ತಿಳಿಸಲಿದ್ದಾರೆ ಎಂದರು.
ಸರ್ಕಾರದಿಂದ ಸುಮಾರು 25ಕ್ಕೂ ಹೆಚ್ಚು ಜಯಂತಿಗಳನ್ನು ಆಚರಿಸಲಾಗುತ್ತದೆ. ಈಗ ನೀಡುತ್ತಿರುವ ಹಣ ಕಡಿಮೆಯಾಗುತ್ತಿದ್ದು, ಆದ ಕಾರಣ ನಾಡಪ್ರಭುಗಳ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಪ್ರತಿ ತಾಲ್ಲೂಕು ಮಟ್ಟಕ್ಕೂ ಬಿಬಿಎಂಪಿಯಿಂದ 1 ಲಕ್ಷ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ ಎಂದರು.
ನಾಡಪ್ರಭು ಕೆಂಪೇಗೌಡರ ಜಯಂತಿಗೆ ಪ್ರತಿ ಸಮುದಾಯದ ಗುರುಗಳನ್ನು ಆಹ್ವಾನಿಸಿಬೇಕು. ಇವರು ಜಾತಿ- ಧರ್ಮಗಳನ್ನು ಮೀರಿದ ನಾಯಕ. ಕೇವಲ ಒಂದು ಸಮುದಾಯಕ್ಕೆ ಸೇರಿದವರಲ್ಲ. ಪ್ರತಿ ಆಚಾರ, ವಿಚಾರ ವೃತ್ತಿ, ಸಮಾಜ, ಸಮುದಾಯಗಳನ್ನು ಕಾಪಾಡಿಕೊಂಡು ಬರುತ್ತಿದ್ದವರು ಇವರು ಎಂದರು.
ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳುತ್ತಾರೆ. ಅದೇ ರೀತಿ ನಾವು ಮತ್ತು ಮುಂದಿನ ಪೀಳಿಗೆ ಕೆಂಪೇಗೌಡರನ್ನು ಮರೆಯಬಾರದು. ಒಬ್ಬ ವ್ಯಕ್ತಿ ಹಿಂದೆ ಎಷ್ಟು ಜನ ಇರುತ್ತಾರೆ ಎನ್ನುವುದು ಮುಖ್ಯವಲ್ಲ. ಅವರ ಸಾಧನೆ ಹಾಗೂ ಎಷ್ಟು ಜನರ ಬದುಕನ್ನು ಬದಲಾಯಿಸಿದ್ದಾರೆ ಎನ್ನುವುದು ಮುಖ್ಯ. ಇದು ಕೆಂಪೇಗೌಡರ ಜೀವನದಲ್ಲಿ ನಿಜವಾಗಿದೆ ಎಂದರು.




