ಬೆಂಗಳೂರು: ಕರ್ನಾಟಕದ ಐಟಿ ಕ್ಷೇತ್ರದ ದಿಗ್ಗಜ ಸಂಸ್ಥೆ ಇನ್ಫೋಸಿಸ್ ವಿರುದ್ಧ ಶೋಷಣೆ ಆರೋಪದ ಪ್ರಕರಣ ದಾಖಲಾಗಿದೆ. ಐಟಿ ಪದವೀಧರರನ್ನು ಈ ಸಂಸ್ಥೆ ಶೋಷಣೆ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದರ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮಾಹಿತಿ ತಂತ್ರಜ್ಞಾನ ಸೇವಾ ಕಂಪನಿ ಇನ್ಫೊಸಿಸ್, ಐ.ಟಿ. ಪದವೀಧರರನ್ನು ಶೋಷಣೆಗೆ ಗುರಿಪಡಿಸಿದೆ ಎಂಬ ಆರೋಪ ಕೇಂದ್ರ ಸರ್ಕಾರವನ್ನು ತಲುಪಿದೆ. ಈ ದೂರಿನ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಕಾರ್ಮಿಕ ಸಚಿವಾಲಯ ರಾಜ್ಯದ ಕಾರ್ಮಿಕ ಇಲಾಖೆಗೆ ಸೂಚಿಸಿದೆ.
ಸಿಸ್ಟಂ ಎಂಜಿನಿಯರ್ ಮತ್ತು ಡಿಜಿಟಲ್ ಸ್ಪೆಷಲಿಸ್ಟ್ ಎಂಜಿನಿಯರ್ ಹುದ್ದೆಗಳಿಗೆ (ಒಟ್ಟು 2,500) ನೇಮಕ ಮಾಡಿಕೊಳ್ಳುವುದಾಗಿ ಕಂಪನಿ 2022ರಲ್ಲಿಯೇ ಹೇಳಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಆದರೂ ಇಲ್ಲಿಯವರೆಗೆ ತಮ್ಮನ್ನು ನೇಮಕಾತಿ ಮಾಡಿಕೊಂಡಿಲ್ಲ. ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ನಾವು ಬೇರೆ ಕಡೆ ಕೆಲಸಕ್ಕೂ ಸೇರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಐಟಿ ಪದವೀಧರರು ಆರೋಪಿಸಿದ್ದಾರೆ.
ಈ ಕುರಿತು ಐ.ಟಿ. ಉದ್ಯೋಗಿಗಳ ಸಂಘಟನೆಯಾದ ಎನ್ಐಟಿಇಎಸ್ನ ಅಧ್ಯಕ್ಷ ಹರಪ್ರೀತ್ ಸಿಂಗ್ ಸಲುಜಾ ಎಂಬುವರು ಇ-ಮೇಲ್ ಮೂಲಕ ಕೇಂದ್ರ ಕಾರ್ಮಿಕ ಇಲಾಖೆಗೆ ಸಲ್ಲಿಸಿದ ದೂರಿಗೆ ಪ್ರತಿಯಾಗಿ ಕೇಂದ್ರ, ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ರಾಜ್ಯಕ್ಕೆ ಸೆಪ್ಟೆಂಬರ್ 3ರಂದು ಬರೆದ ಪತ್ರದಲ್ಲಿ ಹೇಳಿದೆ.




