ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಸೆ.13ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್ಬುಾಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಚಿತ್ರದುರ್ಗ ನಗರದಲ್ಲಿ ಸೆ.13ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಸಂದರ್ಭದಲ್ಲಿ ಘರ್ಜಿಸಲು 9 DJ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ ಎಂದು ಸ್ಟೇಟಸ್ ಹಾಕಿದ್ದ.
ಈಗಾಗಲೇ ಜಿಲ್ಲಾಧಿಕಾರಿಗಳು ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿ.ಜೆ. ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಆದರೆ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದ ಆರ್.ಮಂಜುನಾಥ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಐಡಿ manju achar prince ನಲ್ಲಿ ‘ಇತಿಹಾಸ ಸೃಷ್ಠಿಸಲು ಸಿದ್ದವಾಗಿದೆ ಚಿತ್ರದುರ್ಗ ಬೃಹತ್ ಶೋಭಾಯಾತ್ರೆ, 13-09-2025 ಶನಿವಾರ ಪ್ರಪಥಮ ಬಾರಿಗೆ ಚಿತ್ರದುರ್ಗ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಘರ್ಜಿಸಲು 9 ಡಿಜೆ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ’ ಎಂಬುದಾಗಿ ಸ್ಟೇಟಸ್ ಹಾಕಿದ್ದ.
ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ಜನರು ಡಿಜೆ ಬಳಸುವಂತೆ ಪ್ರಚೋದನೆ ಮಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತ ಕೆಲಸ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಮೊಳಕಾಲ್ಮೂರು ಪೊಲೀಸ್ ಠಾಣೆ ಆರ್.ಮಂಜುನಾಥ ವಿರುದ್ದ ಬಿ.ಎನ್.ಎಸ್.ಎಸ್-2023 ರಿತ್ಯಾ ಕಲಂ 126(2) ಅಡಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಡಳಿತ ಶೋಭಾಯಾತ್ರೆ ಮರವಣಿಗೆಯಲ್ಲಿ ಯಾವುದೇ ಡಿ.ಜೆ. ಬಳಕೆಗೆ ಅನುಮತಿ ನೀಡಿಲ್ಲ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.




