ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ರೈತ ಕುಟುಂಬದ ಗೃಹಬಂಧನ ವಿಚಾರ ಪ್ರಸ್ತಾಪಿಸಿ ಸಾಮಾಜಿಕ ಜಲಾತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ’ ಎಂದು ಆರೋಪಿಸಿದ್ದಾರೆ.
ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ವಿಳಂಬವಾಗಿದ್ದರಿಂದ ಸಾಲಕೊಟ್ಟವರು ರೈತನ ಪತ್ನಿ, ಪುತ್ರನನ್ನು ಅಕ್ರಮ ಗೃಹಬಂಧನದಲ್ಲಿಟ್ಟಿದ್ದರು. ಇದರಿಂದಾಗಿ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಈ ರಾಜ್ಯದ ಜನತೆ ಇನ್ನೂ ಏನೇನು ಅನುಭವಿಸಬೇಕೋ? ತಿಳಿಯದಾಗಿದೆ. ಗೂಂಡಾಗಳು, ಮೀಟರ್ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ‘ನೆರಳಿನ ಭಾಗ್ಯ’ ಕಲ್ಪಿಸಿಕೊಡುತ್ತಿದೆ ಎಂದಿದ್ದಾರೆ.
ರಾಜ್ಯ ಸರ್ಕಾರಕ್ಕೆ ನೈತಿಕತೆಯಿದ್ದರೆ ಕೂಡಲೇ ಯಮಕನಮರಡಿ ರೈತನ ಆತ್ಮಹತ್ಯೆ ಪ್ರಕರಣದ ಕುರಿತು ಕಠಿಣ ಕ್ರಮ ಜರುಗಿಸಿ ಮುಂದೆಂದೂ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಿ. ರೈತ ಸಮೂಹಕ್ಕೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ರೂಪಿಸಲಿ, ಮೃತ ರೈತನ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಹಾಗೂ ಭದ್ರತೆ ಒದಗಿಸಬೇಕು ಎಂದಿದ್ದಾರೆ.




