ಬಳ್ಳಾರಿ: ಜಿಲ್ಲೆಯ ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ಖರೀದಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಎಂ.ತಿರುಮಲೇಶ್ ತಿಳಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಪ್ರಸ್ತಕ ಸಾಲಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಬಿತ್ತನೆ ಕಾರ್ಯ ಪ್ರಾರಂಭವಾಗುವ ಅವಕಾಶವಿದೆ. ಹತ್ತಿ ಬೆಳೆಯುವ ರೈತರು ಹತ್ತಿ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಅಧಿಕೃತ ಬಿಲ್ಲು ಪಡೆದು ಖರೀದಿಸಬೇಕು, ಯಾವುದೇ ಕಾರಣಕ್ಕೂ ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಅಂತಹ ಬೀಜ ಮಾರಾಟಗಾರರ ಕಂಡುಬಂದಲ್ಲಿ ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.



