ಬೆಂಗಳೂರು: ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೃತಪಟ್ಟವರನ್ನು ರೋಷನ್, ಉದಯ್ ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬ ಪೇಂಟರ್, ಮತ್ತೊಬ್ಬರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು. ಕಡಬಗೆರೆ ಕ್ರಾಸ್ನಲ್ಲಿ ಸತೀಶ್ ಎಂಬುವರು ನಾಲ್ಕು ಅಂತಸ್ತಿನ ಮನೆ ನಿರ್ಮಾಣ ಮಾಡಿಸುತ್ತಿದ್ದು, ಕೆಲ ಕಾರ್ಮಿಕರು ಈ ಕಟ್ಟಡದಲ್ಲೇ ಅಡುಗೆ ಮಾಡಿಕೊಂಡು ಅಲ್ಲೇ ವಾಸವಿದ್ದರು.
ಮಧ್ಯಾಹ್ನ ಈ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಕ್ಕಪಕ್ಕದವರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ದಾವಿಸಿದ ಸಿಬ್ಬಂದಿ ಬೆಂಕಿ ನಂದಿಸಿದರು. ಆದರೂ ಅಷ್ಟರಲ್ಲಾಗಲೇ ಇಬ್ಬರು ಸಜೀವ ದಹನವಾಗಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಡುಗೆಗೆ ಬಳಸುತ್ತಿದ್ದ ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡು ಅಗ್ನಿ ಅವಘಡ ಸಂಭವಿಸಿರಬಹುದೇ ಅಥವಾ ವೆಲ್ಡಿಂಗ್ ಮಾಡುವಾಗ ಬೆಂಕಿ ಕಿಡಿಯಿಂದ ಈ ಘಟನೆ ನಡೆದಿದೆಯೇ ಎಂಬ ಬಗ್ಗೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.




