ಮಣಿಪುರದಲ್ಲಿ ನಿತೀಶ್ ಕುಮಾರ್ ಅವರಿಗೆ ಹಿನ್ನಡೆ

4 years ago

ಇಂಫಾಲ: ದಿಢೀರ್ ಬೆಳವಣಿಗೆಯಲ್ಲಿ ಮಣಿಪುರದ 5 ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಹಿನ್ನಡೆ ಆಗಿದೆ.

ಈ ಸಂಬಂಧ ಮಣಿಪುರ ವಿಧಾನಸಭೆ ಕಾರ್ಯದರ್ಶಿ ಕೆ.ಮೇಘಜಿತ್‌ ಸಿಂಗ್‌ ಹೇಳಿಕೆ ಬಿಡುಗಡೆ ಮಾಡಿದ್ದು, ಐದು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗಿರುವುದನ್ನು ಸ್ಪೀಕರ್‌ ಅನುಮೋದಿಸಿದ್ದಾರೆ ಎಂದಿದ್ದಾರೆ.

ಬಿಹಾರದಲ್ಲಿ ಕಳೆದ ತಿಂಗಳು ಬಿಜೆಪಿ ಜೊತೆಗಿನ ಸಖ್ಯ ತೊರೆದ ನಿತೀಶ್ ಕುಮಾರ್, ಮಹಾಮೈತ್ರಿ ಮೂಲಕ ಆರ್​ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿ ಹೊಸ ಸರ್ಕಾರ ರಚಿಸಿದ್ದರು. ಈ ನಡುವೆ ಮಣಿಪುರದಲ್ಲಿ ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗುವ ಮೂಲಕ ಬಿಜೆಪಿ ತಿರುಗೇಟು ಕೊಟ್ಟಿದೆ.

ಮಾರ್ಚ್​ ತಿಂಗಳಲ್ಲಿ ನಡೆದ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು 7 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು.  60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಗೆಲುವು ದಾಖಲಿಸಿ, ಸರ್ಕಾರ ರಚಿಸಿತ್ತು.  ಬಿರೇನ್ ಸಿಂಗ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ.

ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಅಚಾಬ್ ಉದ್ದೀನ್, ಎಲ್ ಎಂ ಖೌಟೆ ಮತ್ತು ತಂಗಜಮ್ ಅರುಣ್​ಕುಮಾರ್ ಬಿಜೆಪಿ ಸೇರ್ಪಡೆಯಾಗಿರುವ ಶಾಸಕರು. ಮಣಿಪುರದಲ್ಲಿ ಜೆಡಿಯು ಶಾಸಕರು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಬಿಹಾರ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಣಿಪುರದಲ್ಲೂ ಜೆಡಿಯು ಶಾಸಕರು ಬಿಜೆಪಿಗೆ ನೀಡಿದ್ದ ಬೆಂಬಲ ವಾಪಸ್​ ಪಡೆಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಇದೀಗ . ಐದು ಶಾಸಕರು ಬಿಜೆಪಿ ಸೇರಿದ್ದಾರೆ.

Leave a Reply