ಬೆಂಗಳೂರು: ಕಬ್ಬು ಬೆಳೆಗಾರರಿಗೆ ಶೇ 9.50 ಸಕ್ಕರೆ ಇಳುವರಿ ಆಧಾರದಲ್ಲಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ತೂಕದಲ್ಲಿ ಆಗುತ್ತಿರುವ ಮೋಸ ತಡೆಗಟ್ಟಬೇಕು ಮೊದಲಾದ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋ ನಡೆಸಲು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್.ಎನ್.ಭರತ್ರಾಜ್, ರಾಜ್ಯ ಸರ್ಕಾರ ಪ್ರತಿ ಟನ್ಗೆ 500 ಎಸ್ಎಪಿ ನಿಗದಿಪಡಿಸಬೇಕು, ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿ ಮಾಡಬೇಕು, ಸಕ್ಕರೆ ಇಳುವರಿ ಪ್ರಕಟಣೆಯಲ್ಲಿ ಮತ್ತು ತೂಕದಲ್ಲಿ ಆಗುವ ಮೋಸ ತಡೆಯಲು ಪ್ರತಿ ಕಾರ್ಖಾನೆ ವ್ಯಾಪ್ತಿಗೆ ಸಮಿತಿ ರಚಿಸಿ, ಆ ಸಮಿತಿಗೆ ಐದು ಮಂದಿ ಕಬ್ಬು ಬೆಳೆಗಾರರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.
2009ಕ್ಕಿಂತ ಮೊದಲು ಶೇ 8.5 ಸಕ್ಕರೆ ಇಳುವರಿ ಆಧಾರದಲ್ಲಿ ಬೆಂಬಲ ಬೆಲೆ ನಿಗದಿ ಮಾಡುತ್ತಿದ್ದರು. 2010ರಿಂದ 2018ರವರೆಗೆ ಶೇ 9.5ಕ್ಕೆ. 2018 ರಿಂದ 2022ರ ವರೆಗೆ ಶೇ 10ಕ್ಕೆ, 2023 ರಿಂದ ಶೇ 10.25 ಸಕ್ಕರೆ ಇಳುವರಿ ಆಧಾರದಲ್ಲಿ ನ್ಯಾಯಸಮ್ಮತ ಮತ್ತು ಗೌರವಯುತ ದರ (ಎಫ್ಆರ್ಪಿ) ನಿಗದಿ ಮಾಡುತ್ತಾರೆ. ಶೇಕಡ ಒಂದರಷ್ಟು ಇಳುವರಿ ಹೆಚ್ಚಾದರೆ 332 ಎಫ್ಆರ್ಪಿ ದರಕ್ಕಿಂತ ಹೆಚ್ಚಾಗಿ ಕೊಡಬೇಕಾಗುತ್ತದೆ. ಶೇ 8.50 ಆಧಾರದಲ್ಲಿ ಎಫ್ಆರ್ಪಿ ನಿಗದಿಯಾಗಿದ್ದರೆ 10.25 ಇಳುವರಿ ಕಬ್ಬಿಗೆ ಟನ್ನಿಗೆ 3,400 ದರದ ಲೆಕ್ಕದಲ್ಲಿ ₹581 ಸೇರ್ಪಡೆಯಾಗಿ 3,981 ನೀಡಬೇಕಾಗಿತ್ತು ಎಂದರು.
ರಾಜ್ಯದಲ್ಲಿ ಶೇ12ರಷ್ಟು ಇಳುವರಿ ಬರುವ ಪ್ರದೇಶಗಳಿವೆ, ಅವುಗಳಿಗೆ ಮತ್ತೆ 581 ಸೇರ್ಪಡೆಯಾದರೆ ಒಂದು ಟೆನ್ ಕಬ್ಬಿಗೆ ₹ 4,562 ಕನಿಷ್ಠ ಬೆಂಬಲ ಬೆಲೆ ನೀಡಬೇಕಾಗುತ್ತದೆ. ಆದರೆ ಇಳುವರಿ ಕಡಿಮೆ ಎಂದು ತೋರಿಸಿ ಸದ್ಯ ಟನ್ನಿಗೆ 3,400ರಷ್ಟು ಮಾತ್ರ ನೀಡಲಾಗುತ್ತಿದೆ ಎಂದರು.
ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಸಕ್ಕರೆ ನಿಯಂತ್ರಣ ಮಂಡಳಿಯಲ್ಲಿ ನಮೂದಿಸಿರುವ ಮಾನದಂಡದಂತೆಯೇ ಮಾಡಬೇಕು, ಹೆಚ್ಚುವರಿ ಕಟಾವು ಮಾಡುವುದರ ವಿರುದ್ಧ ಕರ್ನಾಟಕ ಕಬ್ಬು ಬೆಳೆಗಾರ ಸಂಘ ಹೋರಾಟ ನಡೆಸಿ ಹೆಚ್ಚುವರಿ ಹಣ ವಾಪಸ್ ರೈತರಿಗೆ ಕೊಡಿಸಲು ಯತ್ನಿಸುತ್ತಿದೆ. ಇದಕ್ಕೆ ರೈತರ ದೃಢ ಹೋರಾಟ ಅಗತ್ಯ ಇದೆ. ಇದಕ್ಕಾಗಿಯೇ ರೈತರ ಸಂಕಷ್ಟಗಳ ಕುರಿತು ಸರ್ಕಾರದ ಗಮನ ಸೆಳೆಯಲು ಡಿ.12ರಂದು ಸುವರ್ಣ ವಿಧಾನಸೌಧ ಚಲೋ ನಡೆಯುತ್ತಿದೆ ಎಂದರು.




