ಎಸ್ ಡಿ ಪಿ ಐ ಆಗ್ರಹ
ದಾವಣಗೆರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಜಾದ್ ನಗರ 9 ಮತ್ತು 12ನೇ ವಾರ್ಡ್ ಬ್ರಾಂಚ್ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಪಡಿಸಿ ಜನರ ಸಂಕಷ್ಟ ಪರಿಹರಿಸುವಂತೆ ಮನವಿ ಸಲ್ಲಿಸಲಾಯಿತು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ 12ನೇ ವಾರ್ಡ್ ಆಜಾದ್ ನಗರ ಮುಖ್ಯ ರಸ್ತೆಯಲ್ಲಿ 2021-22 ಸಾಲಿನ 15ನೇ ಹಣಕಾಸು ಆಯೋಗದ ಜನರಲ್ ಬೇಸಿಕ್ ಗ್ರಾಂಟ್ ನಲ್ಲಿ ಅಂದಾಜು 9 ಲಕ್ಷ ಹಣವನ್ನು ವಿನಿಯೋಗಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ ಇದು ಕಳೆದ 1 ವರ್ಷದಿಂದ ಕೆಟ್ಟಿರುವುದರಿಂದ ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದೆ. ಇದನ್ನೇ ನಂಬಿಕೊಂಡಿದ್ದ ಸ್ಥಳೀಯರು ನಗರದ ಬೇರೆ ಬೇರೆ ಕಡೆ ಹೋಗಿ ಕುಡಿಯುವ ನೀರು ತರುವ ದುಸ್ಥಿತಿ ಎದುರಾಗಿದೆ ಎಂದು ಆಯುಕ್ತರಿಗೆ ಎಸ್ ಡಿ ಪಿ ಐ ಸದಸ್ಯರು ವಿವರಿಸಿದರು.
9 ಮತ್ತು 12ನೇ ವಾರ್ಡಿನ ಕಾರ್ಪೊರೇಟರ್ ಗಳು ತಮಗೂ ಮತ್ತು ಇದಕ್ಕೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಲಕ್ಷ ಲಕ್ಷ ಸಾರ್ವಜನಿಕರ ತೆರಿಗೆ ಹಣವನ್ನು ವಿನಿಯೋಗಿಸಿ ನಿರ್ಮಿಸಿದ ಈ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಮತ್ತು ಜನರ ಸಂಕಷ್ಟದ ಬಗೆಗೆ ಮಾಹಿತಿಯೊಂದಿಗೆ ಆಯುಕ್ತರಿಗೆ ವಿವರಿಸಿ, ಶೀಘ್ರವಾಗಿ ಮುತುವರ್ಜಿ ವಹಿಸಿ ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ನಿಯೋಗದಲ್ಲಿ ಆಜಾದ್ ನಗರ 9 ಮತ್ತು 12ನೇ ವಾರ್ಡಿನ ಬ್ರಾಂಚ್ ನ ಪದಾಧಿಕಾರಿಗಳು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಆರ್. ತಾಹೀರ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಏಜಾಜ್ ಅಹಮದ್ ಮೊದಲಾದವರು ಹಾಜರಿದ್ದರು.




