ಎಸ್ ಡಿ ಪಿ ಐ ಆಗ್ರಹ
ದಾವಣಗೆರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಜಾದ್ ನಗರ 9 ಮತ್ತು 12ನೇ ವಾರ್ಡ್ ಬ್ರಾಂಚ್ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಪಡಿಸಿ ಜನರ ಸಂಕಷ್ಟ ಪರಿಹರಿಸುವಂತೆ ಮನವಿ ಸಲ್ಲಿಸಲಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ 12ನೇ ವಾರ್ಡ್ ಆಜಾದ್ ನಗರ ಮುಖ್ಯ ರಸ್ತೆಯಲ್ಲಿ 2021-22 ಸಾಲಿನ 15ನೇ ಹಣಕಾಸು ಆಯೋಗದ ಜನರಲ್ ಬೇಸಿಕ್ ಗ್ರಾಂಟ್ ನಲ್ಲಿ ಅಂದಾಜು 9 ಲಕ್ಷ ಹಣವನ್ನು ವಿನಿಯೋಗಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ ಇದು ಕಳೆದ 1 ವರ್ಷದಿಂದ ಕೆಟ್ಟಿರುವುದರಿಂದ ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದೆ. ಇದನ್ನೇ ನಂಬಿಕೊಂಡಿದ್ದ ಸ್ಥಳೀಯರು ನಗರದ ಬೇರೆ ಬೇರೆ ಕಡೆ ಹೋಗಿ ಕುಡಿಯುವ ನೀರು ತರುವ ದುಸ್ಥಿತಿ ಎದುರಾಗಿದೆ ಎಂದು ಆಯುಕ್ತರಿಗೆ ಎಸ್ ಡಿ ಪಿ ಐ ಸದಸ್ಯರು ವಿವರಿಸಿದರು.
9 ಮತ್ತು 12ನೇ ವಾರ್ಡಿನ ಕಾರ್ಪೊರೇಟರ್ ಗಳು ತಮಗೂ ಮತ್ತು ಇದಕ್ಕೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಲಕ್ಷ ಲಕ್ಷ ಸಾರ್ವಜನಿಕರ ತೆರಿಗೆ ಹಣವನ್ನು ವಿನಿಯೋಗಿಸಿ ನಿರ್ಮಿಸಿದ ಈ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಮತ್ತು ಜನರ ಸಂಕಷ್ಟದ ಬಗೆಗೆ ಮಾಹಿತಿಯೊಂದಿಗೆ ಆಯುಕ್ತರಿಗೆ ವಿವರಿಸಿ, ಶೀಘ್ರವಾಗಿ ಮುತುವರ್ಜಿ ವಹಿಸಿ ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ನಿಯೋಗದಲ್ಲಿ ಆಜಾದ್ ನಗರ 9 ಮತ್ತು 12ನೇ ವಾರ್ಡಿನ ಬ್ರಾಂಚ್ ನ ಪದಾಧಿಕಾರಿಗಳು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಆರ್. ತಾಹೀರ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಏಜಾಜ್ ಅಹಮದ್ ಮೊದಲಾದವರು ಹಾಜರಿದ್ದರು.




