ಮುಜರಾಯಿ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ರಾಮಲಿಂಗಾರೆಡ್ಡಿಯವರು ಈ ಇಲಾಖೆಗೆ ಹೊಸ ರೀತಿಯ ಆಯಾಮವನ್ನು ನೀಡುತ್ತಾ ಬಂದಿರುತ್ತಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಭಕ್ತರು ಮತ್ತು ಅರ್ಚಕ ಸಿಬ್ಬಂದಿ ಇವರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನ ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಈ ಇಲಾಖೆಯಲ್ಲಿ ದುಡಿಯುವ ಮಂದಿಗೆ ಹೆಚ್ಚಿನ ನೆರವನ್ನು ಒದಗಿಸಿ ಕೊಡುತ್ತಿದ್ದಾರೆ.
ಮುಜರಾಯಿ ಇಲಾಖೆಗೆ ತನ್ನದೇ ಆದಂತಹ ಕಟ್ಟಡ ಇರಲಿಲ್ಲ ಇಲಿಯ ತನಕ ಇದು ಚಾಮರಾಜಪೇಟೆಯಲ್ಲಿ ಕಾರ್ಯವನ್ನು ನಿರ್ವಹಿಸುತ್ತಿತ್ತು. ರಾಮಲಿಂಗಾರೆಡ್ಡಿರವರ ಆಸಕ್ತಿಯ ಕಾರಣದಿಂದಾಗಿ ಬೆಂಗಳೂರಿನ ಕೆ ಆರ್ ವೃತ್ತದಲ್ಲಿರುವ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಸುಮಾರು ಹತ್ತು ಸಾವಿರ ಚದುರ ಅಡಿ ಜಾಗದಲ್ಲಿ 27 ಕೋಟಿ ರೂಪಾಯಿಗಳ ವೆಚ್ಚದಲ್ಲಿ 5 ಅಂತಸ್ತಿನ ಧಾರ್ಮಿಕ ಸೌಧ ಕಟ್ಟಡವನ್ನು ನಿರ್ಮಾಣ ಮಾಡಲು ಬೇಕಾದಂತಹ ಸಿದ್ಧತೆಗಳನ್ನ ಮಾಡಿಕೊಂಡು ಸಂಪುಟದ ಅನುಮತಿಯನ್ನು ಪಡೆದುಕೊಂಡಿರುವುದು ಸಂತೋಷದ ಸಂಗತಿಯಾಗಿದೆ.
ಆದಷ್ಟು ಬೇಗನೆ ಧಾರ್ಮಿಕ ಸೌದದ ಕಟ್ಟಡ ನಿರ್ಮಾಣವಾಗಿ ಶ್ರೀರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿಯೇ ಅದರ ಉದ್ಘಾಟನೆಯ ಆಗಲಿ ಎಂಬುದು ಎಲ್ಲರ ಆಶಯ. ಮುಜರಾಯಿ ಇಲಾಖೆ ತನ್ನದೇ ಆದಂತಹ ಸ್ವಂತ ಕಟ್ಟಡವನ್ನು ಹೊಂದುತ್ತಿರುವುದು ಸಹ ಇಲಾಖೆಯ ಕಾರ್ಯ ಪ್ರಗತಿಗೆ ಮತ್ತಷ್ಟು ಪೂರಕವಾಗುತ್ತದೆ.
ಧಾರ್ಮಿಕ ಸೌಧ ಕಟ್ಟಡವನ್ನು ನಿರ್ಮಿಸುವ ನಿಟ್ಟಿನಲ್ಲಿ ಆಸಕ್ತಿಯನ್ನ ಹೊಂದಿ ಈ ಬಗ್ಗೆ ವಿಶೇಷವಾದ ಪ್ರಯತ್ನಗಳನ್ನ ನಡೆಸಿದ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರಿಗೆ ಮತ್ತೊಮ್ಮೆ ಅಭಿನಂದನೆಗಳು.
– ಕೆ.ಎಸ್.ನಾಗರಾಜ್, ಬೆಂಗಳೂರು




