ಬೆಂಗಳೂರು: ಸರ್ಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರಮುಖ ಹುದ್ದೆ ಕೊಡಿಸುವುದಾಗಿ ನಂಬಿಸಿ ವಂಚಿಸುವ ವಂಚಕರು ಇದೀಗ ಭಾರತೀಯ ಗುಪ್ತಚರ ಸಂಸ್ಥೆ (RAW)ಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸುವ ಘಟನೆ ಬೆಳಕಿಗೆ ಬಂದಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾ ದಲ್ಲಿ ಇಂಟಲಿಜೆನ್ಸ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವೇಣುಗೋಪಾಲ್ ಹಾಗೂ ಅರವಿಂದ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ನಕಲಿ ಲೆಟರ್ ಹೆಡ್ಸ್, ಆದೇಶ ಪತ್ರ, ಐಡಿ ಕಾರ್ಡ್ಸ್, ಸೀಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇಂಟಲಿಜೆನ್ಸ್ ಸ್ಪೆಷಲ್ ಆಫೀಸರ್ಗಳೆಂದು ಪರಿಚಯಿಸಿಕೊಳ್ಳುತ್ತಿದ್ದ ಈ ಆರೋಪಿಗಳು ಬೆಂಗಳೂರು ನಗರ ಕಚೇರಿಯನ್ನು ತಾವೇ ನಿರ್ವಹಿಸುತ್ತಿರುವುದಾಗಿ ಹೇಳಿಕೊಳ್ಳುತ್ತಿದ್ದರು. ನಂತರ ರಾ ಗೆ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ನೇಮಕಾತಿ ಮಾಡಿಕೊಳ್ಳುವ ಅಧಿಕಾರ ತಮಗೆ ಇದೆಯೆಂದು ನಂಬಿಸಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ಹಣ ಪಡೆದುಕೊಳ್ಳುತ್ತಿದ್ದರು. ನಂತರ ಕೆಲಸ ಖಾಯಂ ಆದಂತೆ ನಕಲಿ ಆದೇಶ ಪತ್ರಗಳನ್ನು ನೀಡಿ ವಂಚಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ವಂಚನೆಗೊಳಗಾಗಿದ್ದ ಜೆ.ಪಿ. ನಗರದ ನಿವಾಸಿಯೊಬ್ಬರು ಸಿಸಿಬಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಸಿಸಿಬಿ ವಿಶೇಷ ವಿಚಾರಣಾ ದಳದ ಪೊಲೀಸರು, ಆಂಧ್ರಪ್ರದೇಶದಲ್ಲಿ ವೇಣುಗೋಪಾಲ್ನನ್ನು ಬಂಧಿಸಿದ್ದರು. ಬಳಿಕ ಜಯನಗರದ 9ನೇ ಬ್ಲಾಕ್ನ ನಿವಾಸಿಯಾಗಿರುವ ಅರವಿಂದ್ ಎಂಬಾತನನ್ನು ಬಂಧಿಸಿದ್ದಾರೆ.
ಜೆರಾಕ್ಸ್ ಮತ್ತು ಸ್ಟೇಷನರಿ ಅಂಗಡಿ ಹೊಂದಿದ್ದ ಅರವಿಂದ್, ತನಿಖೆಗೆ ಹಾಜರಾಗುವಂತೆ ನೀಡಿದ್ದ ನೋಟಿಸ್ ಅನ್ನು ಸ್ವೀಕರಿಸಿರಲಿಲ್ಲ. ನಂತರ ಆತನನ್ನ ಬಂಧಿಸಲಾಯಿತು. ಆರೋಪಿಗಳು ಸುಮಾರು 30 ಉದ್ಯೋಗಾಂಕ್ಷಿಗಳಿಗೆ ಕೆಲಸ ಕೊಡಿಸುವುದಾಗಿ ವಂಚಿಸಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ವೇಣುಗೋಪಾಲ್ ತಂಗುತ್ತಿದ್ದ ಗಾಂಧಿನಗರದ ಲಾಡ್ಜ್ ನಲ್ಲಿ ರಾ ಹೆಸರಿನಲ್ಲಿರುವ 86 ಲೆಟರ್ ಹೆಡ್ಸ್, ಗುರುತಿನ ಚೀಟಿ, 6 ಸೇವಾ ಪುಸ್ತಕಗಳು, ನಕಲಿ ನೇಮಕಾತಿ ಆದೇಶದ ಪತ್ರಗಳು, 9 ಸೀಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಯಲಹಂಕದ ಸುಪ್ರೀಂ ಲೇಔಟ್ನಲ್ಲಿ ಆರೋಪಿಗಳು ಹೊಂದಿದ್ದ ಕಚೇರಿಯಿಂದ ಕಲರ್ ಪ್ರಿಂಟರ್, ಲ್ಯಾಪ್ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದೆ.




